ಉಡುಪಿ: ಕ್ಷಯ ರೋಗದ ಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷವಹಿಸದೆ ಕೂಡಲೇ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕುಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕದ ವೈದ್ಯಕೀಯ ಅಧಿಕಾರಿ ಡಾ. ವನಿತಾ ಗುರುದತ್ ಹೇಳಿದರು.
ಅವರು ಇಂದು ನಗರದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ಧನ್ವಂತರಿ ನರ್ಸಿಂಗ್ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯ ದಿನಾಚರಣಿ ಉದ್ಘಾಟಿಸಿ ಮಾತನಾಡಿದರು.
ಕ್ಷಯ ರೋಗವನ್ನು ಆರಂಭದಲ್ಲೇ ಗುರುತಿಸುವುದರೊಂದಿಗೆ ಸಮರ್ಪಕ ಹಾಗೂ ನಿರಂತರ ವೈದ್ಯಕೀಯ ಚಿಕಿತ್ಸೆಯನ್ನು ಪಡೆದರೆ ಈ ರೋಗದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದ ಅವರು ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು.
ಸಾಮಾನ್ಯವಾಗಿ ಕ್ಷಯರೋಗದಿಂದ ಬಳಲುತ್ತಿರುವ ವ್ಯಕ್ತಿಯು ಕೆಮ್ಮಿದಾಗ, ಉಗುಳಿದಾಗ ಹೊರಬರುವ ಸೂಕ್ಮ್ಷ ದ್ರವÀಗಳ ತುಂತುರುಗಳ ಮೂಲಕ ವೈರಸ್ ರೋಗವು ಇತರ ವ್ಯಕ್ತಿಗಳ ದೇಹ ಸೇರಿದಾಗ ಅಂತಹ ವ್ಯಕ್ತಿಗಳು ಕ್ಷಯ ರೋಗಕ್ಕೆ ತುತ್ತಾಗುತ್ತಾರೆ ಎಂದರು.
ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಮಾರ್ಚ್ 24ರಂದು ವಿಶ್ವ ಕ್ಷಯ ರೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕ್ಷಯ ರೋಗವು ಟ್ಯುಬರ್ಕ್ಯುಲೋಸಿಸ್ ಎಂಬ ಬ್ಯಾಕ್ಟೀರಿಯದಿಂದ ಹರಡುತ್ತದೆ ಎಂದರು
ಎರಡು ವಾರಗಳ ಕಾಲ ನಿರಂತರ ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ರಾತ್ರಿ ವೇಳೆ ಬೆವರುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದ ಅವರು, ಈ ಲಕ್ಷಣ ಕಂಡ ಕೂಡಲೇ ಸಮೀಪದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಪುರಾತನ ಕಾಲದಿಂದಲೂ ಪ್ರಚಲಿತದಲ್ಲಿರುವ ಕಾಯಿಲೆ ಎಂದರೆ ಟಿಬಿ, ಆ ಕಾಲದಲ್ಲಿ ಮನೆಯಲ್ಲೇ ಹಳ್ಳಿ ಮದ್ದನ್ನು ಮಾಡುತ್ತಿದ್ದರು ಆದರೆ ಈಗ ತಂತ್ರಜ್ಞಾನ ಬಹಳ ಮುಂದುವರೆದಿದೆ ತಕ್ಷಣದಲ್ಲೇ ಚಿಕಿತ್ಸೆ ದೊರೆಯುತ್ತದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು, ನಮ್ಮಿಂದ ಒಂದು ಜೀವ ಉಳಿಸುವ ಪ್ರಯತ್ನ ಮಾಡಬೇಕು ಬೇರೆಯವರಿಗೆ ಸಹಾಯ ಮಾಡಿ ಬದುಕಿಗೆ ಸಾರ್ಥಕತೆ ಭಾವ ಮೂಡುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ಡಾ. ಅರವಿಂದ್ ನಾಯಕ್ ಅಮ್ಮುಂಜೆ, ಧನ್ವಂತರಿ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ರೆಡ್ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ವೈ ಜಿ ಸ್ವಾಗತಿಸಿ, ಧನ್ವಂತರಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕ ಶಿವಪ್ರಸಾದ್ ವಂದಿಸಿ, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮ ನಿರೂಪಿಸಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…