ಉಡುಪಿ,: ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.
ಸಂಘ ಪರಿವಾರ ಹಮ್ಮಿಕೊಂಡ ತ್ರಿಶೂಲ ದೀಕ್ಷೆಗೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನವರೆ ಮೊದಲ ಬಲಿಯಾಗಲಿದ್ದಾರೆ ಎಂದು ರಾಜಾರೋಷವಾಗಿ ಬೆದರಿಕೆಯೊಡ್ಡಿದ ಹಿಂದೂ ಜಾಗರಣಾ ವೇದಿಕೆಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಮತ್ತು ತನ್ನದೇ ಇಲಾಖೆಯ ಕಾರ್ಯಕ್ರಮದಲ್ಲಿ ಪೊಲೀಸರು ಖಾಕಿ ಕಳಚಿ ಕೇಸರಿ ತೊಡಲು ಪ್ರಚೋದನೆ ನೀಡಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತನ್ನ ಕರ್ತವ್ಯ ಚ್ಯುತಿಯಿಂದುಂಟಾದ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಹೇಳಿದೆ.
ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್ ಗಿರಿ ಅವ್ಯಾಹತವಾಗಿ ನಡೆಯುತ್ತಿದ್ದು ಗಂಡು ಹೆಣ್ಣು ಒಟ್ಟಾಗಿ ತಿರುಗಾಡದಂತಹ ಅಮಾನವೀಯ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಇದು ತಾಲೀಬಾನ್ ಸಂಸ್ಕೃತಿಯಾಗಿ ರೂಪಗೊಳ್ಳದಂತೆ ತಡೆಯ ಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಿ ಇದಕ್ಕೆ ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.
ಕೇಸರಿ ಮತ್ತು ತ್ರಿಶೂಲ ತ್ಯಾಗ ಪರಿತ್ಯಾಗ, ಶಾಂತಿ ಸೌಹಾರ್ದತೆಯ ಸಂಕೇತ. ಆದರೆ ಬಿಜೆಪಿ ಇದನ್ನು ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಸಂಘಪರಿವಾರದ ಮೂಲಕ ಸಾಮಾಜಿಕ ಭಯೋತ್ಪದನೆಗೆ ಬಳಸಿಕೊಳ್ಳುತ್ತಿದೆ. ಇದು ಹಿಂದೂ ಆಸ್ಮಿತೆಗೆ ಮಾಡಿದ ಮಹಾಮೋಸ. ಮುಂದೊಂದು ದಿನ ಸ್ವಯಂ ಬಿಜೆಪಿಯೇ ಇದಕ್ಕೆ ಬಲಿಯಾಗಿ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…