Featured

ಉಡುಪಿ: ಖಾಕಿ ಕೇಸರಿ ಮತ್ತು ತ್ರಿಶೂಲ ದೀಕ್ಷೆ ವಿವಾದ ; ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು :  ಜಿಲ್ಲಾ ಕಾಂಗ್ರೆಸ್ ಆಗ್ರಹ – Vishwanews24

ಉಡುಪಿ: ಖಾಕಿ ಕೇಸರಿ ಮತ್ತು ತ್ರಿಶೂಲ ದೀಕ್ಷೆ ವಿವಾದ ; ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು :  ಜಿಲ್ಲಾ ಕಾಂಗ್ರೆಸ್ ಆಗ್ರಹ – Vishwanews24

ಉಡುಪಿ,: ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.

ಸಂಘ ಪರಿವಾರ ಹಮ್ಮಿಕೊಂಡ ತ್ರಿಶೂಲ ದೀಕ್ಷೆಗೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನವರೆ ಮೊದಲ ಬಲಿಯಾಗಲಿದ್ದಾರೆ ಎಂದು ರಾಜಾರೋಷವಾಗಿ ಬೆದರಿಕೆಯೊಡ್ಡಿದ ಹಿಂದೂ ಜಾಗರಣಾ ವೇದಿಕೆಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಮತ್ತು ತನ್ನದೇ ಇಲಾಖೆಯ ಕಾರ್ಯಕ್ರಮದಲ್ಲಿ ಪೊಲೀಸರು ಖಾಕಿ ಕಳಚಿ ಕೇಸರಿ ತೊಡಲು ಪ್ರಚೋದನೆ ನೀಡಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತನ್ನ ಕರ್ತವ್ಯ ಚ್ಯುತಿಯಿಂದುಂಟಾದ ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಹೇಳಿದೆ.

ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್ ಗಿರಿ ಅವ್ಯಾಹತವಾಗಿ ನಡೆಯುತ್ತಿದ್ದು ಗಂಡು ಹೆಣ್ಣು ಒಟ್ಟಾಗಿ ತಿರುಗಾಡದಂತಹ ಅಮಾನವೀಯ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಇದು ತಾಲೀಬಾನ್ ಸಂಸ್ಕೃತಿಯಾಗಿ ರೂಪಗೊಳ್ಳದಂತೆ ತಡೆಯ ಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಿ ಇದಕ್ಕೆ ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.

ಕೇಸರಿ ಮತ್ತು ತ್ರಿಶೂಲ ತ್ಯಾಗ ಪರಿತ್ಯಾಗ, ಶಾಂತಿ ಸೌಹಾರ್ದತೆಯ ಸಂಕೇತ. ಆದರೆ ಬಿಜೆಪಿ ಇದನ್ನು ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಸಂಘಪರಿವಾರದ ಮೂಲಕ ಸಾಮಾಜಿಕ ಭಯೋತ್ಪದನೆಗೆ ಬಳಸಿಕೊಳ್ಳುತ್ತಿದೆ. ಇದು ಹಿಂದೂ ಆಸ್ಮಿತೆಗೆ ಮಾಡಿದ ಮಹಾಮೋಸ. ಮುಂದೊಂದು ದಿನ ಸ್ವಯಂ ಬಿಜೆಪಿಯೇ ಇದಕ್ಕೆ ಬಲಿಯಾಗಿ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

4 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

5 hours ago