Featured

ಉಡುಪಿ :ಖಾಸಗಿ ಬಸ್‌ಗಳು ನಿಯಮ ಪಾಲಿಸದೇ ಇದ್ದಲ್ಲಿ  ಕಾನೂನು ಕ್ರಮ ; ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ – vishwanews24

ಉಡುಪಿ :ಖಾಸಗಿ ಬಸ್‌ಗಳು ನಿಯಮ ಪಾಲಿಸದೇ ಇದ್ದಲ್ಲಿ  ಕಾನೂನು ಕ್ರಮ ; ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ

ಉಡುಪಿ : ಖಾಸಗಿ ಬಸ್‌ಗಳು ನಿಯಮಾವಳಿಗಳನ್ನು ಪಾಲನೆ ಮಾಡದಿದ್ದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಫುಟ್‌ಬೋರ್ಡ್‌ಗಳಲ್ಲಿ ನೇತಾಡುವುದು, ನಿರ್ದಿಷ್ಟ ಪ್ರಮಾಣಕ್ಕಿಂತ ಅಧಿಕ ಪ್ರಯಾಣಿಕರನ್ನು ಹಾಕುವ ಬಸ್‌ಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಪರವಾನಿಗೆ ಇದ್ದೂ ರೂಟ್ ಗಳಲ್ಲಿ ಸಂಚರಿಸದಿರುವ ಖಾಸಗಿ ಬಸ್‌ಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಕೇಳಿಬರುವ ಬಗ್ಗೆ ಚರ್ಚೆ ನಡೆಯಿತು.

ಕೆಎಸ್ಸಾರ್ಟಿಸಿ ಅಧಿಕಾರಿಗಳು ಮಾತನಾಡಿ, ಹೊಸ ರೂಟ್‌ಗಳಿಗೆ ಕೆಎಸ್ಸಾರ್ಟಿಸಿ ಬಸ್‌ ಹಾಕಿದರೆ, ಖಾಸಗಿ ಬಸ್ ಮಾಲಕರು ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುವ ಕಾರಣ ಸಮಸ್ಯೆ ಎದುರಾಗಿದೆ. ಸರಕಾರಿ ಬಸ್‌ಗಳನ್ನು ಹಾಕುವಂತೆ ಪ್ರಯಾಣಿಕರಿಂದ ಈಗಾಗಲೇ ಹಲವು ಮನವಿಗಳು ಬಂದಿವೆ. ಆದರೆ ಖಾಸಗಿ ಬಸ್ ಮಾಲಕರು ತಡೆಯಾಜ್ಞೆ ತರುವ ಕಾರಣ ಸಮಸ್ಯೆ ಉಂಟಾಗುತ್ತಿದೆ ಎಂದರು.

ಇದಕ್ಕೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಖಾಸಗಿ ಬಸ್‌ಗಳು ಸಾರ್ವಜನಿಕರಿಗೆ ಸೇವೆ ನೀಡುವ ನಿಟ್ಟಿನಲ್ಲಿ ಕಾರ್ಯಾಚರಿಸಬೇಕು. ಲಭ್ಯ ಇರುವ ಪರ್ಮಿಟ್ ಪ್ರಕಾರ ಬಸ್‌ಗಳು ಓಡಾಟ ಮಾಡುತ್ತಿವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಜನರ ಹಿತದೃಷ್ಟಿಯಿಂದ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಹಾಕಲಾಗುವುದು. ಯಾವ ರೂಟ್ ಗಳಲ್ಲಿ ಬಸ್‌ಗಳು ಓಡಾಟ ಮಾಡುತ್ತಿಲ್ಲ ಹಾಗೂ ಎಲ್ಲಿಗೆ ಆವಶ್ಯಕತೆ ಇದೆ ಎಂಬ ಬಗ್ಗೆ ಖಾಸಗಿ ಬಸ್‌ ಮಾಲಕರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳು ವಾರದೊಳಗೆ ನಿರ್ಧರಿಸಬೇಕು.

ನ. 10ರಂದು ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು.

Vishwa News 24

Recent Posts

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

12 minutes ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಮೆಟ್ಟಿಲಿನವರೆಗೂ ನೀರು – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…

35 minutes ago

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ – vishwanews24

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…

46 minutes ago

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ…

48 minutes ago

ಹೆಚ್‌ಡಿಕೆ, ನಿಖಿಲ್‌ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ ಸೇರ್ಪಡೆ – vishwanews24

ಹೆಚ್‌ಡಿಕೆ, ನಿಖಿಲ್‌ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…

1 hour ago

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

20 hours ago