ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಗ್ರಾಪಂ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಪ್ರಾರ್ಥನೆ ಮಾಡುತ್ತಿರುವ ವೀಡಿಯೋವನ್ನು ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿಂದೂ ಸಂಘಟನೆಗಳು ಅಸಮಾಧಾನ ಹೊರಹಾಕಿವೆ.
ಪಂಚಾಯತ್ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಗಂಗೊಳ್ಳಿಯಲ್ಲಿ ಕಾಂಗ್ರೆಸ್-ಎಸ್ಡಿಪಿಐ ಅಧಿಕಾರ ಹಂಚಿಕೆ ವೇಳೆ ಘಟನೆ ನಡೆದಿದೆ.
ಈ ಗ್ರಾಮ ಪಂಚಾಯಿತಿಯು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುತ್ತದೆ. ಎಸ್ಡಿಪಿಐ ಮುಖಂಡರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ದುವಾ ಮಾಡಿಸಿದ್ದಾರೆ.
ಕಾಂಗ್ರೆಸ್ ಸದಸ್ಯೆ ಜಯಂತಿ ಖಾರ್ವಿ ಎಂಬವರಿಗೆ ಅಧ್ಯಕ್ಷ ಸ್ಥಾನ ಹಾಗೂ ಎಸ್ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ಗೆ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ. ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ವೇಳೆ ಮೌಲ್ವಿ ಕರೆಸಿ ಪ್ರಾರ್ಥನೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…