ಉಡುಪಿ: 2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮೀನುಗಾರಿಕೆ ಸಚಿವರಾದ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು.
ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.
ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…