Featured

ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ಅವಘಡ: 1.75 ಕೋಟಿ ರೂ ಪರಿಹಾರ ಮಂಜೂರು : ಯಶ್ಪಾಲ್ ಸುವರ್ಣ – vishwanews24

ಗಂಗೊಳ್ಳಿ ಬೋಟ್ ಅಗ್ನಿ ಅವಘಡ: 1.75 ಕೋಟಿ ರೂ ಪರಿಹಾರ ಮಂಜೂರು ..

ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರ – ಯಶ್ಪಾಲ್ ಸುವರ್ಣ

ಉಡುಪಿ: 2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಮೀನುಗಾರಿಕೆ ಸಚಿವರಾದ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು.

ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

8 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

8 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago