ಉಡುಪಿ; ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸನಿಹದ ಮನೆಯ ಹಿಂಭಾಗದಲ್ಲಿ ಗಂಡಸಿನ ಅಸ್ಥಿಪಂಜರವು ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ. ರಾತ್ರಿಯ ಸಮಯದಲ್ಲಿ ಘಟನಾ ಸ್ಥಳದಲ್ಲಿ ಮಹಜರು ಪ್ರಕ್ರಿಯೆಗಳು ಪೋಲಿಸರಿಂದ ನಡೆದ ಬಳಿಕ ಕಳೇಬರವನ್ನು ಮಣಿಪಾಲ ಕೆ.ಎಂ.ಸಿ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲಾಯಿತು.
ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಅಸ್ಥಿಪಂಜರದ ಸಾಗಟ ನಡೆಸಲು ಇಲಾಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಿ ನೆರವಾದರು. ಅಸ್ಥಿ ಪಂಜರ ಪತ್ತೆಯಾಗಿರುವ ಸ್ಥಳದ ಮಾಲಿಕರು ಮುಂಬೈಯಲ್ಲಿ ವಾಸವಾಗಿದ್ದು, ಊರಿಗೆ ಬಂದಾಗ ಅವರಿಗೆ ಘಟನೆ ಕಂಡುಬಂದಿದೆ.
ಘಟನಾ ಸ್ಥಳದಲ್ಲಿದ್ದು ಡಿ.ವೈ.ಎಸ್.ಪಿ- ಟಿ.ಡಿ ಪ್ರಭು, ಉಡುಪಿ ಉಪವಿಭಾಗ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್, ಪಿ.ಎಸ್.ಐ ರಾಘವೇಂದ್ರ ಕಾನೂನು ಪ್ರಕ್ರಿಯೆ ನಡೆಸಿದರು.
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…