Featured

ಉಡುಪಿ : ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಶೋಭೆ ತರುವುದಿಲ್ಲ :ಪ್ರಸಾದ್‌ರಾಜ್ ಕಾಂಚನ್ – vishwanews24

ಉಡುಪಿ : ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಶೋಭೆ ತರುವುದಿಲ್ಲ :ಪ್ರಸಾದ್‌ರಾಜ್ ಕಾಂಚನ್

ಉಡುಪಿ: ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ.

ಉಡುಪಿಯ ಜನತೆ ನಿಮ್ಮನ್ನ ಶಾಸಕನಾಗಿ ಆಯ್ಕೆ ಮಾಡಿದೆ. ಜನರ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ಅಭಿವೃದ್ದಿಗಾಗಿ ಅನುದಾನಗಳನ್ನು ತರುವ ಕೆಲಸ ಶಾಸಕನದ್ದು, ಅನುದಾನ ತರುವಲ್ಲಿ ವಿಫಲರಾಗಿರುವ ನಿಮ್ಮ ಗಂಡಸುತನ ಎಲ್ಲಿ ಹೋಗಿದೆ ಎಂದು ಪ್ರಸಾದ್‌ರಾಜ್ ಕಾಂಚನ್ ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ನಿಮ್ಮದೆ ಬಿಜೆಪಿ ಸರ್ಕಾರ ಇದೆ ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರಸ್ತೆಗೆ ಒಮ್ಮೆ ಮುಕ್ತಿ ನೀಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಿ. ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದೆ, ಅದಕ್ಕೆ ವೇಗ ಕೊಡುವ ಕೆಲಸ ಮಾಡಿ. ಅದು ಬಿಟ್ಟು ಸದಾ ಶಾಂತಿಯಿಂದ ಕೂಡಿದ ಉಡುಪಿಯಂತಹ ಕ್ಷೇತ್ರದಲ್ಲಿ ಶಾಂತಿ ಭಂಗದಂತಹ ಹೇಳಿಕೆಗಳನ್ನು ನೀಡುವುದು. ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರ ಬಗ್ಗೆ ಅಗೌರದ ಹೇಳಿಕೆಗಳನ್ನು ನೀಡುವುದು ಬಿಟ್ಟು, ಕ್ಷೇತ್ರದಲ್ಲಿ ಸೌಹರ್ದತೆ ಕಾಪಾಡುವ ಕೆಲಸ ಮಾಡುವುದರ ಜೊತೆ ಅನುದಾನ ತರುವ ಕೆಲಸವನ್ನು ಜವಬ್ದಾರಿಯುತವಾಗಿ ಮಾಡಿ ಎಂದು ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago