ಉಡುಪಿ: ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ.
ಉಡುಪಿಯ ಜನತೆ ನಿಮ್ಮನ್ನ ಶಾಸಕನಾಗಿ ಆಯ್ಕೆ ಮಾಡಿದೆ. ಜನರ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ಅಭಿವೃದ್ದಿಗಾಗಿ ಅನುದಾನಗಳನ್ನು ತರುವ ಕೆಲಸ ಶಾಸಕನದ್ದು, ಅನುದಾನ ತರುವಲ್ಲಿ ವಿಫಲರಾಗಿರುವ ನಿಮ್ಮ ಗಂಡಸುತನ ಎಲ್ಲಿ ಹೋಗಿದೆ ಎಂದು ಪ್ರಸಾದ್ರಾಜ್ ಕಾಂಚನ್ ಪ್ರಶ್ನಿಸಿದ್ದಾರೆ.
ಕೇಂದ್ರದಲ್ಲಿ ನಿಮ್ಮದೆ ಬಿಜೆಪಿ ಸರ್ಕಾರ ಇದೆ ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರಸ್ತೆಗೆ ಒಮ್ಮೆ ಮುಕ್ತಿ ನೀಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಿ. ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದೆ, ಅದಕ್ಕೆ ವೇಗ ಕೊಡುವ ಕೆಲಸ ಮಾಡಿ. ಅದು ಬಿಟ್ಟು ಸದಾ ಶಾಂತಿಯಿಂದ ಕೂಡಿದ ಉಡುಪಿಯಂತಹ ಕ್ಷೇತ್ರದಲ್ಲಿ ಶಾಂತಿ ಭಂಗದಂತಹ ಹೇಳಿಕೆಗಳನ್ನು ನೀಡುವುದು. ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರ ಬಗ್ಗೆ ಅಗೌರದ ಹೇಳಿಕೆಗಳನ್ನು ನೀಡುವುದು ಬಿಟ್ಟು, ಕ್ಷೇತ್ರದಲ್ಲಿ ಸೌಹರ್ದತೆ ಕಾಪಾಡುವ ಕೆಲಸ ಮಾಡುವುದರ ಜೊತೆ ಅನುದಾನ ತರುವ ಕೆಲಸವನ್ನು ಜವಬ್ದಾರಿಯುತವಾಗಿ ಮಾಡಿ ಎಂದು ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…