Featured

ಉಡುಪಿ : ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಶೋಭೆ ತರುವುದಿಲ್ಲ :ಪ್ರಸಾದ್‌ರಾಜ್ ಕಾಂಚನ್ – vishwanews24

ಉಡುಪಿ : ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಶೋಭೆ ತರುವುದಿಲ್ಲ :ಪ್ರಸಾದ್‌ರಾಜ್ ಕಾಂಚನ್

ಉಡುಪಿ: ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ.

ಉಡುಪಿಯ ಜನತೆ ನಿಮ್ಮನ್ನ ಶಾಸಕನಾಗಿ ಆಯ್ಕೆ ಮಾಡಿದೆ. ಜನರ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ಅಭಿವೃದ್ದಿಗಾಗಿ ಅನುದಾನಗಳನ್ನು ತರುವ ಕೆಲಸ ಶಾಸಕನದ್ದು, ಅನುದಾನ ತರುವಲ್ಲಿ ವಿಫಲರಾಗಿರುವ ನಿಮ್ಮ ಗಂಡಸುತನ ಎಲ್ಲಿ ಹೋಗಿದೆ ಎಂದು ಪ್ರಸಾದ್‌ರಾಜ್ ಕಾಂಚನ್ ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ನಿಮ್ಮದೆ ಬಿಜೆಪಿ ಸರ್ಕಾರ ಇದೆ ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರಸ್ತೆಗೆ ಒಮ್ಮೆ ಮುಕ್ತಿ ನೀಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಿ. ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದೆ, ಅದಕ್ಕೆ ವೇಗ ಕೊಡುವ ಕೆಲಸ ಮಾಡಿ. ಅದು ಬಿಟ್ಟು ಸದಾ ಶಾಂತಿಯಿಂದ ಕೂಡಿದ ಉಡುಪಿಯಂತಹ ಕ್ಷೇತ್ರದಲ್ಲಿ ಶಾಂತಿ ಭಂಗದಂತಹ ಹೇಳಿಕೆಗಳನ್ನು ನೀಡುವುದು. ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರ ಬಗ್ಗೆ ಅಗೌರದ ಹೇಳಿಕೆಗಳನ್ನು ನೀಡುವುದು ಬಿಟ್ಟು, ಕ್ಷೇತ್ರದಲ್ಲಿ ಸೌಹರ್ದತೆ ಕಾಪಾಡುವ ಕೆಲಸ ಮಾಡುವುದರ ಜೊತೆ ಅನುದಾನ ತರುವ ಕೆಲಸವನ್ನು ಜವಬ್ದಾರಿಯುತವಾಗಿ ಮಾಡಿ ಎಂದು ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago