Featured

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ 10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್, ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ – Vishwanews24

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ

10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್..

ಕಾಪು ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ..

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಕರಾವಳಿಯ‌ ಖ್ಯಾತ ಯೂಟ್ಯೂಬರ್ ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ 10 ಲಕ್ಷ ಸಂಗ್ರಹಿಸಿ ಕೊಟ್ಟಿದ್ದಾರೆ.

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಯಕ್ಷಗಾನ ವೇಷವನ್ನು ಧರಿಸಿ ಒಂದೇ ದಿನದಲ್ಲಿ ಹತ್ತು ಲಕ್ಷರೂಪಾಯಿ ಸಂಗ್ರಹಿಸಿ ಬಾಲಕಿಗೆ ನೆರವು ನೀಡಿದ್ದಾರೆ.

ವೃತ್ತಿಯಲ್ಲಿ ಸಿನಿಮಾಟೋಗ್ರಾಫರ್ ಮತ್ತು ಪ್ರವೃತ್ತಿಯಲ್ಲಿ ಬೈಕ್ ರೈಡರ್, ಅಡ್ವೆಂಚರ್ಸ್ ಆಗಿರುವ ಕಾಪು ಮೂಲದ ಸಚಿನ್ ಶೆಟ್ಟಿ ಶಟರ್ ಬಾಕ್ಸ್ ಫಿಲಂಸ್ ಎಂಬ ಯೂಟ್ಯೂಬ್ ಚಾನಲ್‌ಅನ್ನೂ ಹೊಂದಿದ್ದು ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯ ಕುಚ್ಚೂರು ಗ್ರಾಮದ ಚಂದ್ರ ನಾಯ್ಕ್ ಎಂಬುವವರ ಮಗಳಾದ ಹತ್ತು ವರ್ಷದ ಸಾನ್ವಿ ಎನ್ನುವ ಬಾಲಕಿ “ತಲಾಸೆಮಿಯಾ ಮೇಜರ್” ಎನ್ನುವ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು “ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್” ಎನ್ನುವ ಚಿಕಿತ್ಸೆ ಮಾಡಬೇಕಿದೆ. ಈ ಚಿಕಿತ್ಸೆಗೆ 40 ಲಕ್ಷ ರೂಪಾಯಿ ಬೇಕಾಗಿದೆ. ಬಡ ಕುಟುಂಬದ ಸಾನ್ವಿ ಹೆತ್ತವರಿಗೆ ಅಷ್ಟು ದೊಡ್ಡ ಮಟ್ಟದ ಹೊಂದಿಸುವುದು ಅಸಾಧ್ಯವಾಗಿದೆ. ಮನೆಯ ಬೆಳಕಾಗಿದ್ದ ಮಗಳ ಚಿಕಿತ್ಸೆಗೆ ಹಣ ಹೊಂದಿಸುವುದರ ಬಗ್ಗೆ ಚಿಂತಾಕ್ರಾಂತರಾದ ಸಾನ್ವಿ ಹೆತ್ತವರಿಗೆ ಸಚಿನ್ ಶೆಟ್ಟಿ ಸ್ನೇಹಿತ ವರ್ಗ ಈಗ ನೆರವಾಗಿದೆ.

ಸಮಾಜಮುಖಿ ಕಾರ್ಯದಲ್ಲೂ ತೊಡಗಿಕೊಂಡಿರುವ ಸಚಿನ್ ಶೆಟ್ಟಿ ಪುಟ್ಟ ಮಗುವಿನ ಪ್ರಾಣ ಉಳಿಸಲು ಮಾಡಿದ ಕಾರ್ಯ ಈಗ ಜನರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಸಚಿನ್ ಶೆಟ್ಟಿ, ಸುದೀಪ್ ಶೆಟ್ಟಿ, ಚೇತನ್ ಶೆಟ್ಟಿ, ನಿತೀಶ್ ಪೂಜಾರಿ ಸೇರಿದಂತೆ ಸ್ನೇಹಿತರ ವರ್ಗ ಕೃಷ್ಣ ಜನ್ಮಾಷ್ಟಮಿಯ ದಿನದಂದು ಯಕ್ಷಗಾನ ವೇಷ ಧರಿಸಿ ಉಡುಪಿ ಪೇಟೆಯಲ್ಲಿ ಸುತ್ತಾಡಿ ಮಗುವಿಗಾಗಿ ಹಣ ಸಂಗ್ರಹ ಮಾಡಿದೆ. ಅದನ್ನು ಕಳೆದ ಏಳು ವರ್ಷಗಳಿಂದ ಪ್ರತಿ ಕೃಷ್ಣ ಜನ್ಮಾಷ್ಟಮಿಯ ಸಂರ್ಭದಲ್ಲಿ ವಿವಿಧ ವೇಷ ಧರಿಸಿ ಬಡ ಮಕ್ಕಳಿಗೆ ಸಹಾಯ ಮಾಡುತ್ತಿರುವ ರವಿ‌ ಕಟಪಾಡಿ ಅವರ ಮೂಲಕ‌ ಬಾಲಕಿಯ‌ ಹೆತ್ತವರಿಗೆ‌ ನೀಡಿದ್ದಾರೆ.

ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್ – Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago