Featured

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ 10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್, ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ – Vishwanews24

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಒಂದೇ ದಿನದಲ್ಲಿ

10 ಲಕ್ಷ ಸಂಗ್ರಹಿಸಿ ಕೊಟ್ಟ ಯೂಟ್ಯೂಬರ್..

ಕಾಪು ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ ತಂಡ..

ಉಡುಪಿ : ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ವೇಷ ಧರಿಸಿ ಕರಾವಳಿಯ‌ ಖ್ಯಾತ ಯೂಟ್ಯೂಬರ್ ಶಟರ್ ಬಾಕ್ಸ್ ಫಿಲಂಸ್ ಖ್ಯಾತಿಯ ಸಚಿನ್ ಶೆಟ್ಟಿ 10 ಲಕ್ಷ ಸಂಗ್ರಹಿಸಿ ಕೊಟ್ಟಿದ್ದಾರೆ.

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಯಕ್ಷಗಾನ ವೇಷವನ್ನು ಧರಿಸಿ ಒಂದೇ ದಿನದಲ್ಲಿ ಹತ್ತು ಲಕ್ಷರೂಪಾಯಿ ಸಂಗ್ರಹಿಸಿ ಬಾಲಕಿಗೆ ನೆರವು ನೀಡಿದ್ದಾರೆ.

ವೃತ್ತಿಯಲ್ಲಿ ಸಿನಿಮಾಟೋಗ್ರಾಫರ್ ಮತ್ತು ಪ್ರವೃತ್ತಿಯಲ್ಲಿ ಬೈಕ್ ರೈಡರ್, ಅಡ್ವೆಂಚರ್ಸ್ ಆಗಿರುವ ಕಾಪು ಮೂಲದ ಸಚಿನ್ ಶೆಟ್ಟಿ ಶಟರ್ ಬಾಕ್ಸ್ ಫಿಲಂಸ್ ಎಂಬ ಯೂಟ್ಯೂಬ್ ಚಾನಲ್‌ಅನ್ನೂ ಹೊಂದಿದ್ದು ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯ ಕುಚ್ಚೂರು ಗ್ರಾಮದ ಚಂದ್ರ ನಾಯ್ಕ್ ಎಂಬುವವರ ಮಗಳಾದ ಹತ್ತು ವರ್ಷದ ಸಾನ್ವಿ ಎನ್ನುವ ಬಾಲಕಿ “ತಲಾಸೆಮಿಯಾ ಮೇಜರ್” ಎನ್ನುವ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು “ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್” ಎನ್ನುವ ಚಿಕಿತ್ಸೆ ಮಾಡಬೇಕಿದೆ. ಈ ಚಿಕಿತ್ಸೆಗೆ 40 ಲಕ್ಷ ರೂಪಾಯಿ ಬೇಕಾಗಿದೆ. ಬಡ ಕುಟುಂಬದ ಸಾನ್ವಿ ಹೆತ್ತವರಿಗೆ ಅಷ್ಟು ದೊಡ್ಡ ಮಟ್ಟದ ಹೊಂದಿಸುವುದು ಅಸಾಧ್ಯವಾಗಿದೆ. ಮನೆಯ ಬೆಳಕಾಗಿದ್ದ ಮಗಳ ಚಿಕಿತ್ಸೆಗೆ ಹಣ ಹೊಂದಿಸುವುದರ ಬಗ್ಗೆ ಚಿಂತಾಕ್ರಾಂತರಾದ ಸಾನ್ವಿ ಹೆತ್ತವರಿಗೆ ಸಚಿನ್ ಶೆಟ್ಟಿ ಸ್ನೇಹಿತ ವರ್ಗ ಈಗ ನೆರವಾಗಿದೆ.

ಸಮಾಜಮುಖಿ ಕಾರ್ಯದಲ್ಲೂ ತೊಡಗಿಕೊಂಡಿರುವ ಸಚಿನ್ ಶೆಟ್ಟಿ ಪುಟ್ಟ ಮಗುವಿನ ಪ್ರಾಣ ಉಳಿಸಲು ಮಾಡಿದ ಕಾರ್ಯ ಈಗ ಜನರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಸಚಿನ್ ಶೆಟ್ಟಿ, ಸುದೀಪ್ ಶೆಟ್ಟಿ, ಚೇತನ್ ಶೆಟ್ಟಿ, ನಿತೀಶ್ ಪೂಜಾರಿ ಸೇರಿದಂತೆ ಸ್ನೇಹಿತರ ವರ್ಗ ಕೃಷ್ಣ ಜನ್ಮಾಷ್ಟಮಿಯ ದಿನದಂದು ಯಕ್ಷಗಾನ ವೇಷ ಧರಿಸಿ ಉಡುಪಿ ಪೇಟೆಯಲ್ಲಿ ಸುತ್ತಾಡಿ ಮಗುವಿಗಾಗಿ ಹಣ ಸಂಗ್ರಹ ಮಾಡಿದೆ. ಅದನ್ನು ಕಳೆದ ಏಳು ವರ್ಷಗಳಿಂದ ಪ್ರತಿ ಕೃಷ್ಣ ಜನ್ಮಾಷ್ಟಮಿಯ ಸಂರ್ಭದಲ್ಲಿ ವಿವಿಧ ವೇಷ ಧರಿಸಿ ಬಡ ಮಕ್ಕಳಿಗೆ ಸಹಾಯ ಮಾಡುತ್ತಿರುವ ರವಿ‌ ಕಟಪಾಡಿ ಅವರ ಮೂಲಕ‌ ಬಾಲಕಿಯ‌ ಹೆತ್ತವರಿಗೆ‌ ನೀಡಿದ್ದಾರೆ.

ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago