ಉಡುಪಿ : ಗಣೇಶ ಚತುರ್ಥಿ :ಭರ್ಜರಿಯಾಗಿ ನಡೆಯುತ್ತಿರುವ ಹೂವು, ಹಣ್ಣು ವ್ಯಾಪಾರ -Vishhwanews24
ಉಡುಪಿ : ಗಣೇಶ ಚತುರ್ಥಿ :ಭರ್ಜರಿಯಾಗಿ ನಡೆಯುತ್ತಿರುವ ಹೂವು, ಹಣ್ಣು ವ್ಯಾಪಾರ -Vishhwanews24
ಉಡುಪಿ: ಗಣೇಶ ಚತುರ್ಥಿಗೆ ಎರಡು ದಿನ ಇರುವಂತೆಯೇ ಹಬ್ಬದ ತಯಾರಿ ಜೋರಾಗಿ ನಡೆದಿದೆ, ಮುಖ್ಯವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಹೂವು, ಹಣ್ಣು ಮತ್ತು ಕಬ್ಬಿನ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದ್ದು, ಹಬ್ಬದ ಆಗಮನವನ್ನು ಸಾರಿ ಹೇಳುತ್ತಿದೆ.
ಈ ಬಾರಿ ಈ ಹಿಂದಿನ ವರ್ಷಗಳಂತೆ ದೊಡ್ಡಮಟ್ಟದ ಸಂಭ್ರಮಕ್ಕೆ ಕೊರೊನಾ ಬ್ರೇಕ್ ಹಾಕಿದ್ದು ನಿಜ. ಆದರೂ ಜನರು ತಮ್ಮ ತಮ್ಮ ಮನೆಗಳಲ್ಲೇ ಗಣೇಶನ ಹಬ್ಬವನ್ನು ಆಚರಿಸಲು ಉತ್ಸುಕರಾಗಿರುವುದು ಕಂಡು ಬಂತು.
ಮಠದ ಪರಿಸರ, ರಥಬೀದಿ ಮತ್ತು ನಗರದ ಹಲವೆಡೆಗಳಲ್ಲಿ ದೂರದೂರುಗಳ ಕೃಷಿಕರು ಕಬ್ಬುಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಲಾಕ್ ಡೌನ್ ಬಹುತೇಕ ತೆರವುಗೊಳ್ಳುತ್ತಿರುವುದರಿಂದ ನಗರದಲ್ಲಿ ಜನಸಂದಣಿ ಕೂಡ ಹೆಚ್ಚುತ್ತಿದ್ದು, ಕೊರೊನಾ ಬರುವ ಮುಂಚಿನಂತೆ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.
ಒಟ್ಟಾರೆ ಕೋವಿಡ್ ನಿಯಮಾವಳಿ ಮಧ್ಯೆಯೂ ಜನರು ಹಬ್ಬಕ್ಕೆ ಬೇಕಾದ ಹೂವು ಹಣ್ಣು, ಕಬ್ಬು ಮತ್ತಿತರ ವಸ್ತುಗಳನ್ನು ಆಸಕ್ತಿಯಿಂದ ಖರೀದಿಸುವ ದೃಶ್ಯ ಕಂಡು ಬಂತು.
