ಉಡುಪಿ: ಗಣೇಶ ಚತುರ್ಥಿಗೆ ಎರಡು ದಿನ ಇರುವಂತೆಯೇ ಹಬ್ಬದ ತಯಾರಿ ಜೋರಾಗಿ ನಡೆದಿದೆ, ಮುಖ್ಯವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಹೂವು, ಹಣ್ಣು ಮತ್ತು ಕಬ್ಬಿನ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದ್ದು, ಹಬ್ಬದ ಆಗಮನವನ್ನು ಸಾರಿ ಹೇಳುತ್ತಿದೆ.
ಈ ಬಾರಿ ಈ ಹಿಂದಿನ ವರ್ಷಗಳಂತೆ ದೊಡ್ಡಮಟ್ಟದ ಸಂಭ್ರಮಕ್ಕೆ ಕೊರೊನಾ ಬ್ರೇಕ್ ಹಾಕಿದ್ದು ನಿಜ. ಆದರೂ ಜನರು ತಮ್ಮ ತಮ್ಮ ಮನೆಗಳಲ್ಲೇ ಗಣೇಶನ ಹಬ್ಬವನ್ನು ಆಚರಿಸಲು ಉತ್ಸುಕರಾಗಿರುವುದು ಕಂಡು ಬಂತು.
ಮಠದ ಪರಿಸರ, ರಥಬೀದಿ ಮತ್ತು ನಗರದ ಹಲವೆಡೆಗಳಲ್ಲಿ ದೂರದೂರುಗಳ ಕೃಷಿಕರು ಕಬ್ಬುಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಲಾಕ್ ಡೌನ್ ಬಹುತೇಕ ತೆರವುಗೊಳ್ಳುತ್ತಿರುವುದರಿಂದ ನಗರದಲ್ಲಿ ಜನಸಂದಣಿ ಕೂಡ ಹೆಚ್ಚುತ್ತಿದ್ದು, ಕೊರೊನಾ ಬರುವ ಮುಂಚಿನಂತೆ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.
ಒಟ್ಟಾರೆ ಕೋವಿಡ್ ನಿಯಮಾವಳಿ ಮಧ್ಯೆಯೂ ಜನರು ಹಬ್ಬಕ್ಕೆ ಬೇಕಾದ ಹೂವು ಹಣ್ಣು, ಕಬ್ಬು ಮತ್ತಿತರ ವಸ್ತುಗಳನ್ನು ಆಸಕ್ತಿಯಿಂದ ಖರೀದಿಸುವ ದೃಶ್ಯ ಕಂಡು ಬಂತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…