ಉಡುಪಿ

ಉಡುಪಿ : ಗಣೇಶ ಚತುರ್ಥಿ :ಭರ್ಜರಿಯಾಗಿ ನಡೆಯುತ್ತಿರುವ ಹೂವು, ಹಣ್ಣು  ವ್ಯಾಪಾರ -Vishhwanews24

ಉಡುಪಿ : ಗಣೇಶ ಚತುರ್ಥಿ :ಭರ್ಜರಿಯಾಗಿ ನಡೆಯುತ್ತಿರುವ ಹೂವು, ಹಣ್ಣು  ವ್ಯಾಪಾರ -Vishhwanews24

ಉಡುಪಿ: ಗಣೇಶ ಚತುರ್ಥಿಗೆ ಎರಡು ದಿನ ಇರುವಂತೆಯೇ ಹಬ್ಬದ ತಯಾರಿ ಜೋರಾಗಿ ನಡೆದಿದೆ, ಮುಖ್ಯವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಹೂವು, ಹಣ್ಣು ಮತ್ತು ಕಬ್ಬಿನ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದ್ದು, ಹಬ್ಬದ ಆಗಮನವನ್ನು ಸಾರಿ ಹೇಳುತ್ತಿದೆ.

ಈ ಬಾರಿ ಈ ಹಿಂದಿನ ವರ್ಷಗಳಂತೆ ದೊಡ್ಡಮಟ್ಟದ ಸಂಭ್ರಮಕ್ಕೆ ಕೊರೊನಾ ಬ್ರೇಕ್ ಹಾಕಿದ್ದು ನಿಜ. ಆದರೂ ಜನರು ತಮ್ಮ ತಮ್ಮ ಮನೆಗಳಲ್ಲೇ ಗಣೇಶನ ಹಬ್ಬವನ್ನು ಆಚರಿಸಲು ಉತ್ಸುಕರಾಗಿರುವುದು ಕಂಡು ಬಂತು.

ಮಠದ ಪರಿಸರ, ರಥಬೀದಿ ಮತ್ತು ನಗರದ ಹಲವೆಡೆಗಳಲ್ಲಿ ದೂರದೂರುಗಳ ಕೃಷಿಕರು ಕಬ್ಬುಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಲಾಕ್ ಡೌನ್ ಬಹುತೇಕ ತೆರವುಗೊಳ್ಳುತ್ತಿರುವುದರಿಂದ ನಗರದಲ್ಲಿ ಜನಸಂದಣಿ ಕೂಡ ಹೆಚ್ಚುತ್ತಿದ್ದು, ಕೊರೊನಾ ಬರುವ ಮುಂಚಿನಂತೆ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.

ಒಟ್ಟಾರೆ ಕೋವಿಡ್ ನಿಯಮಾವಳಿ ಮಧ್ಯೆಯೂ ಜನರು ಹಬ್ಬಕ್ಕೆ ಬೇಕಾದ ಹೂವು ಹಣ್ಣು, ಕಬ್ಬು ಮತ್ತಿತರ ವಸ್ತುಗಳನ್ನು ಆಸಕ್ತಿಯಿಂದ ಖರೀದಿಸುವ ದೃಶ್ಯ ಕಂಡು ಬಂತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago