ಉಡುಪಿ: ಗಣೇಶ ಚತುರ್ಥಿಗೆ ಎರಡು ದಿನ ಇರುವಂತೆಯೇ ಹಬ್ಬದ ತಯಾರಿ ಜೋರಾಗಿ ನಡೆದಿದೆ, ಮುಖ್ಯವಾಗಿ ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಹೂವು, ಹಣ್ಣು ಮತ್ತು ಕಬ್ಬಿನ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದ್ದು, ಹಬ್ಬದ ಆಗಮನವನ್ನು ಸಾರಿ ಹೇಳುತ್ತಿದೆ.
ಈ ಬಾರಿ ಈ ಹಿಂದಿನ ವರ್ಷಗಳಂತೆ ದೊಡ್ಡಮಟ್ಟದ ಸಂಭ್ರಮಕ್ಕೆ ಕೊರೊನಾ ಬ್ರೇಕ್ ಹಾಕಿದ್ದು ನಿಜ. ಆದರೂ ಜನರು ತಮ್ಮ ತಮ್ಮ ಮನೆಗಳಲ್ಲೇ ಗಣೇಶನ ಹಬ್ಬವನ್ನು ಆಚರಿಸಲು ಉತ್ಸುಕರಾಗಿರುವುದು ಕಂಡು ಬಂತು.
ಮಠದ ಪರಿಸರ, ರಥಬೀದಿ ಮತ್ತು ನಗರದ ಹಲವೆಡೆಗಳಲ್ಲಿ ದೂರದೂರುಗಳ ಕೃಷಿಕರು ಕಬ್ಬುಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಲಾಕ್ ಡೌನ್ ಬಹುತೇಕ ತೆರವುಗೊಳ್ಳುತ್ತಿರುವುದರಿಂದ ನಗರದಲ್ಲಿ ಜನಸಂದಣಿ ಕೂಡ ಹೆಚ್ಚುತ್ತಿದ್ದು, ಕೊರೊನಾ ಬರುವ ಮುಂಚಿನಂತೆ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.
ಒಟ್ಟಾರೆ ಕೋವಿಡ್ ನಿಯಮಾವಳಿ ಮಧ್ಯೆಯೂ ಜನರು ಹಬ್ಬಕ್ಕೆ ಬೇಕಾದ ಹೂವು ಹಣ್ಣು, ಕಬ್ಬು ಮತ್ತಿತರ ವಸ್ತುಗಳನ್ನು ಆಸಕ್ತಿಯಿಂದ ಖರೀದಿಸುವ ದೃಶ್ಯ ಕಂಡು ಬಂತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…