ಉಡುಪಿ: ಗರುಡ ಗ್ಯಾಂಗ್ನ ಸಕ್ರಿಯ ಸದಸ್ಯ ಹಾಗೂ ಉಡುಪಿ ಜಿಲ್ಲೆಯಲ್ಲದೇ ನೆರೆಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46) ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿರುವ ನಡೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ.
ಕಾರ್ಕಳ ನಗರ ಠಾಣಾ ಉಪನಿರೀಕ್ಷಕರು ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿದ ವರದಿಯನ್ನು, ಎಸ್ಪಿಯವರಯ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ್ದಾರೆ. ಪರಿಶೀಲಿಸಿದ ಅವರು 2025 ರ ಜು.10 ರಂದು ಬಂಧನ ಆದೇಶ ಹೊರಡಿಸಿದ್ದರು. ಕಾರ್ಕಳ ಪೋಲಿಸರು ಅಂದೇ ಆತನನ್ನು ಬಂಧಿಸಿ ಮೈಸೂರಿನ ಕೇಂದ್ರ ಕಾರಗೃಹಕ್ಕೆ ವರ್ಗಾಯಿಸಿದ್ದರು.
ಪೋಲಿಸರ ಈ ನಡೆಯನ್ನು 2025 ಆ.4 ರಂದು ಹೈಕೋರ್ಟ್ನ ಪೀಠದಲ್ಲಿ ಬಂಧನ ಆದೇಶದ ಬಗ್ಗೆ ಆರೋಪಿಯೂ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆದು, ನ್ಯಾಯಾಲಯವು ಜಿಲ್ಲಾಧಿಕಾರಿಯವರ ಆದೇಶವನ್ನು ಎತ್ತಿ ಹಿಡಿದು, ಮೇಲ್ಮನವಿಯನ್ನು ತಿರಸ್ಕರಿಸಿದೆ. ಬಂಧಿತ ಆರೋಪಿಗೆ 2025 ರ ಜು.10 ರ 1 ವರ್ಷದವರೆಗೆ ಬಂಧನ ಆದೇಶವನ್ನು ಮಾನ್ಯ ಮಾಡಿದೆ.
ಬಂಧಿತ ಆರೋಪಿಯ ವಿರುದ್ಧ 2005 ರಿಂದ ಇಲ್ಲಿಯವರೆಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 02 ಪ್ರಕರಣಗಳಲ್ಲಿ ಸಜೆಯಾಗಿದೆ. 08 ಪ್ರಕರಣಗಳಲ್ಲಿ ಸಾಕ್ಷಿದಾರರು ಪ್ರತಿಕೂಲ ಸಾಕ್ಷಿ ನುಡಿದದ್ದರಿಂದ ಖುಲಾಸೆಯಾಗಿದ್ದು, 03 ಪ್ರಕರಣಗಳು ರಾಜಿಯಲ್ಲಿ ಮುಕ್ತಾಯವಾಗಿದೆ. 02 ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿದ್ದು, ಇನ್ನುಳಿದ 02 ಪ್ರಕರಣಗಳು ತನಿಖೆಯಲ್ಲಿವೆ. ಸಜೆಯಾದ ಪ್ರಕರಣಗಳ ಪೈಕಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣೆಯಲ್ಲಿ 2012ನೇ ಸಾಲಿನಲ್ಲಿ ವರದಿಯಾದ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯ ಜೊತೆಗೆ ₹ 50,000 ದಂಡ ವಿಧಿಸಿತ್ತು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…