ಉಡುಪಿ : ನಗರದ ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್ಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯುರಿಟಿ ಗಾರ್ಡ್ನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಗೃಹೋಪಯೋಗಿ ಮಳಿಗೆಯ ಸೆಕ್ಯೂರಿಟಿ ಗಾರ್ಡ್, ಪ್ರಸಾದ್ ಬಂಧಿತ ಆರೋಪಿ. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡ ಹರ್ಷ ಮಳಿಗೆಯ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ ಡಿಸೋಜ(36) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ.9ರಂದು ಕೆಲಸಕ್ಕೆ ಬಂದಿದ್ದ ಪ್ರಸಾದ್, ಮಧ್ಯಾಹ್ನದವರೆಗೆ ಮಾತ್ರ ಕೆಲಸ ಮಾಡಿ ಹೋಗಿದ್ದನು. ಈ ಕುರಿತು ಆತನ ಸೆಕ್ಯೂಟಿರಿ ಗಾರ್ಡ್ ಕಂಪನಿಯ ಮ್ಯಾನೇಜರ್ಗೆ ತಿಳಿಸಲಾಗಿತ್ತು. ಆ.10ರಂದು ಪ್ರಸಾದ್ ಕೆಲಸಕ್ಕೆ ಹಾಜರಿದ್ದು, ಸಂಜೆ ವೇಳೆ ರೋನ್ಸನ್ ಡಿಸೋಜ ಅವರನ್ನು ಪ್ರಸಾದ್ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಶೋರೂಂಗೆ ಬರಲು ತಿಳಿಸಿದ್ದನು. ಅದರಂತೆ ಬಂದ ರೋನ್ಸನ್ ಅವರಲ್ಲಿ ನನ್ನನ್ನು ಕೆಲಸದಿಂದ ತೆಗೆಯಬೇಡಿ ಎಂದು ಪ್ರಸಾದ್ ಹೇಳಿದನು. ಅದಕ್ಕೆ ಮರುದಿನ ಅಧಿಕಾರಿಗಳೊಂದಿಗೆ ಮೀಟಿಂಗ್ನಲ್ಲಿ ಚರ್ಚಿಸಿ ತಿಳಿಸುತ್ತೇನೆ ಎಂದು ಹೇಳಿದ್ದರು.
ಇದರಿಂದ ಸಿಟ್ಟುಕೊಂಡ ಪ್ರಸಾದ್, ಅವಾಚ್ಯ ಶಬ್ಧಗಳಿಂದ ಬೈದಿದ್ದು, ಕಟ್ಟಡದ ಗ್ರೌಂಡ್ ಪ್ಲೋರ್ನಲ್ಲಿ ರೋನ್ಸನ್ ಡಿಸೋಜರನ್ನು ಅಡ್ಡಗಟ್ಟಿ ಚೂರಿಯಿಂದ ಕುತ್ತಿಗೆ, ಎದೆಗೆ ಚುಚ್ಚಿ, ಕಾಲಿನಿಂದ ಒದ್ದು, ಬೆದರಿಕೆ ಹಾಕಿ ಪರಾರಿಯಾಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…