ಉಡುಪಿ : ರಾಜ್ಯದಲ್ಲಿ ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ಲಾಕ್ಡೌನ್ ಪರಿಣಾಮವಾಗಿ ಸಂಕಷ್ಟಕ್ಕೊಳಗಾದ 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2,000 ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಈ ಹಿಂದಿನ ಮಾರ್ಗಸೂಚಿಯಲ್ಲಿ ನೆರವಿನ ಮೊತ್ತನ್ನು ಪಡೆಯಲು ನಿಗದಿಪಡಿಸಿದ ಅಧಿಕಾರಿಗಳಿಂದ ಅಥವಾ ಪತ್ರಾಂಖಿತ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪತ್ರವನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ.
ಆದರೆ ಜುಲೈ 1 ರಂದು ಉಚ್ಛ ನ್ಯಾಯಾಲಯದಲ್ಲಿ ನಡೆದ ನಡವಳಿಯಲ್ಲಿ ಗೃಹ ಕಾರ್ಮಿಕರಿಗೆ ಸಂಬoಧಿಸಿದoತೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ಉದ್ಯೋಗ ದೃಡೀಕರಣ ಪತ್ರದಲ್ಲಿ ಗೃಹ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಮಾಲೀಕರಿಂದ ಸಹಿ ಪಡೆಯಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ಗೃಹ ಕಾರ್ಮಿಕರು ನಿಗದಿಪಡಿಸಿದ ಅಧಿಕಾರಿಗಳಿಂದ ಅಥವಾ ಅವರು ಕಾರ್ಯನಿರ್ವಹಿಸುತ್ತಿರುವ ಮಾಲೀಕರಿಂದ ಸಹಿ ಮಾಡಿಸಿ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಇದಕ್ಕೆ ಪ್ರತ್ಯೇಕ ನಮೂನೆಯ ಉದ್ಯೋಗ ದೃಢೀಕರಣ ಪ್ರಮಾಣ ಪತ್ರವನ್ನು ಹೊರಡಿಸಿದ್ದು, ಮೊಬೈಲ್ ಸಂಖ್ಯೆ ನಮೂದಿಸುವುದು ಐಚ್ಛಿಕಗೊಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ ಸಂಖ್ಯೆ: 155214 ಅನ್ನು ಸಂಪರ್ಕಿಸುವoತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…