ಉಡುಪಿ: 7 ಸದಸ್ಯರೊಳಗೊಂಡ ಗೊರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ.
ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ ಹತ್ತಿರ ಬರುತ್ತಿರುವುದರಿಂದ ಜನರು ದನಗಳನ್ನು ಮಾರಲು ಯತ್ನಿಸುತ್ತಾರೆ ಇದನ್ನು ತಡೆಯಲು ಸೂಕ್ತ ಕ್ರಮ ವಹಿಸಬೇಕೆಂದು” ಹೇಳಿದ್ದಾರೆ.
ಆಗಸ್ಟ್ 24, 2016 ರಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿ 7 ಸದಸ್ಯರೊಳಗೊಂಡ ಸಮಿತಿ ರಚಿಸಿ ಹಬ್ಬಗಳ ಸಂದರ್ಭ ನಡೆಯುವ ಸಾಮೂಹಿಕ ಪ್ರಾಣಿ ವಧೆಯನ್ನು ತಡೆಯುವ ಬಗ್ಗೆ ಸೂಚಿಸಿದೆ. ಆದರೆ ಈ ಆದೇಶವನ್ನು ಪಾಲಿಸಲಾಗುತ್ತಿಲ್ಲವೆಂದು ದೂರಿದ್ದಾರೆ.
ಜಿಲ್ಲಾ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ಕಾನೂನು ಬಾಹಿರವಾಗಿ ದನ ಸಾಗಾಟ ಮಾಡುವುದನ್ನು ತಡೆಯಬೇಕು. ಅದರೊಂದಿಗೆ ಮುಸ್ಲಿಮರು ದನದ ಹತ್ಯೆ ನಡೆಸದೆ ಶಾಂತಿಯುತವಾಗಿ ಹಿಂಸೆ ರಹಿತ ಬಕ್ರೀದ್ ಆಚರಿಸಬೇಕು ಎಂದು ವಿಲಾಸ್ ನಾಯಕ್ ಕರೆ ನೀಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…