ಉಡುಪಿ: 7 ಸದಸ್ಯರೊಳಗೊಂಡ ಗೊರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ.
ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ ಹತ್ತಿರ ಬರುತ್ತಿರುವುದರಿಂದ ಜನರು ದನಗಳನ್ನು ಮಾರಲು ಯತ್ನಿಸುತ್ತಾರೆ ಇದನ್ನು ತಡೆಯಲು ಸೂಕ್ತ ಕ್ರಮ ವಹಿಸಬೇಕೆಂದು” ಹೇಳಿದ್ದಾರೆ.
ಆಗಸ್ಟ್ 24, 2016 ರಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿ 7 ಸದಸ್ಯರೊಳಗೊಂಡ ಸಮಿತಿ ರಚಿಸಿ ಹಬ್ಬಗಳ ಸಂದರ್ಭ ನಡೆಯುವ ಸಾಮೂಹಿಕ ಪ್ರಾಣಿ ವಧೆಯನ್ನು ತಡೆಯುವ ಬಗ್ಗೆ ಸೂಚಿಸಿದೆ. ಆದರೆ ಈ ಆದೇಶವನ್ನು ಪಾಲಿಸಲಾಗುತ್ತಿಲ್ಲವೆಂದು ದೂರಿದ್ದಾರೆ.
ಜಿಲ್ಲಾ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ಕಾನೂನು ಬಾಹಿರವಾಗಿ ದನ ಸಾಗಾಟ ಮಾಡುವುದನ್ನು ತಡೆಯಬೇಕು. ಅದರೊಂದಿಗೆ ಮುಸ್ಲಿಮರು ದನದ ಹತ್ಯೆ ನಡೆಸದೆ ಶಾಂತಿಯುತವಾಗಿ ಹಿಂಸೆ ರಹಿತ ಬಕ್ರೀದ್ ಆಚರಿಸಬೇಕು ಎಂದು ವಿಲಾಸ್ ನಾಯಕ್ ಕರೆ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…