ಉಡುಪಿ: 7 ಸದಸ್ಯರೊಳಗೊಂಡ ಗೊರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ.
ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ ಹತ್ತಿರ ಬರುತ್ತಿರುವುದರಿಂದ ಜನರು ದನಗಳನ್ನು ಮಾರಲು ಯತ್ನಿಸುತ್ತಾರೆ ಇದನ್ನು ತಡೆಯಲು ಸೂಕ್ತ ಕ್ರಮ ವಹಿಸಬೇಕೆಂದು” ಹೇಳಿದ್ದಾರೆ.
ಆಗಸ್ಟ್ 24, 2016 ರಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿ 7 ಸದಸ್ಯರೊಳಗೊಂಡ ಸಮಿತಿ ರಚಿಸಿ ಹಬ್ಬಗಳ ಸಂದರ್ಭ ನಡೆಯುವ ಸಾಮೂಹಿಕ ಪ್ರಾಣಿ ವಧೆಯನ್ನು ತಡೆಯುವ ಬಗ್ಗೆ ಸೂಚಿಸಿದೆ. ಆದರೆ ಈ ಆದೇಶವನ್ನು ಪಾಲಿಸಲಾಗುತ್ತಿಲ್ಲವೆಂದು ದೂರಿದ್ದಾರೆ.
ಜಿಲ್ಲಾ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ಕಾನೂನು ಬಾಹಿರವಾಗಿ ದನ ಸಾಗಾಟ ಮಾಡುವುದನ್ನು ತಡೆಯಬೇಕು. ಅದರೊಂದಿಗೆ ಮುಸ್ಲಿಮರು ದನದ ಹತ್ಯೆ ನಡೆಸದೆ ಶಾಂತಿಯುತವಾಗಿ ಹಿಂಸೆ ರಹಿತ ಬಕ್ರೀದ್ ಆಚರಿಸಬೇಕು ಎಂದು ವಿಲಾಸ್ ನಾಯಕ್ ಕರೆ ನೀಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…