Featured

ಉಡುಪಿ: ಗೋವಾ ಸಿಎಂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ : ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ – Vishwanews24

ಉಡುಪಿ: ಗೋವಾ ಸಿಎಂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ : ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ

ಉಡುಪಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವಾಗ ಮಾಂಸಾಹಾರ ಸೇವನೆ ಮಾಡಿರಲಿಲ್ಲ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಸಾವಂತ್ ಮಧ್ಯಾಹ್ನ ಊಟ ಮಾಡುವಾಗ ನಾನು ಜೊತೆಯಲ್ಲಿದ್ದೆ. ಸಾವಂತ್ ಊಟಕ್ಕೆ ಯಾವುದೇ ಮಾಂಸಹಾರ ಸೇವಿಸಿಲ್ಲ. ಆದರೆ ಸಿಎಂ ಜೊತೆಗೆ ಬಂದಿದ್ದ ಸಿಬ್ಬಂದಿಗಳಿಗೆ ಮಾಂಸಾಹಾರ ಊಟದ ವ್ಯವಸ್ಥೆ ಇತ್ತು ಎಂದರು.

ಗೋವಾ ಸಿಎಂ ಸಾವಂತ್ ಮಾಂಸಹಾರ ಸೇವಿಸಿ ಮಠಕ್ಕೆ ಹೋಗಿದ್ದಾರೆ ಎಂದು ಆರೋಪಿಸುವವರ ಬಳಿ ಏನು ಸಾಕ್ಷ್ಯ ಇದೆಯೋ ನನಗೆ ಗೊತ್ತಿಲ್ಲ. ಅವರು ಹೋಟೇಲಿನ ಮೆನು ನೋಡಿ ಹೇಳಿದ್ದಾರೇನೋ ಗೊತ್ತಿಲ್ಲ. ಸಿಎಂ ಜೊತೆ 40 – 50 ಅಧಿಕಾರಿಗಳು ಬಂದಿದ್ದರು. ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮೀನನ್ನು ಆರ್ಡರ್ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ.. ಕಾರ್-ಟ್ಯಾಕ್ಸಿಗಳಿಗೆ ಅನುಮತಿ :ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ – Vishwanews24

ಚುನಾವಣೆ ಹತ್ತಿರ ಬಂದಿರುವುದರಿಂದ ಈ ಆರೋಪ ಬಂದಿದೆ. ಸಿದ್ದರಾಮಯ್ಯ ನಾನ್ ವೆಜ್ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಫೋಟೊ ಸಮೇತ ಸಾಕ್ಷಿ ಇಟ್ಟು ಬಿಜೆಪಿ ಮಾತನಾಡಿತ್ತು. ಸಿದ್ದರಾಮಯ್ಯ ನಾನು ತಪ್ಪಿ ಹೋದೆ, ನೆನಪಿಲ್ಲ ಎಂದಿದ್ದರೆ ದೊಡ್ಡ ಸುದ್ದಿಯಾಗುತ್ತಿರಲಿಲ್ಲ. ಆದರೆ ಅವರು ನಾನು ದನದ ಮಾಂಸ ತಿಂದು ಹೋಗುತ್ತೇನೆ, ಏನಾಗುತ್ತದೆ ಎಂದು ದರ್ಪದಿಂದ ಮಾತನಾಡಿದ್ದರು. ಕಾಂಗ್ರೆಸ್ ನವರು ಫೋಟೊ, ವೀಡಿಯೊ ನೀಡಿ ಮಾತನಾಡಲಿ ಎಂದು ರಘುಪತಿ ಭಟ್ ಸವಾಲು ಹಾಕಿದರು.

ಭಾನುವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಉಡುಪಿಗೆ ಬಂದಿದ್ದ ಗೋವಾ ಸಿಎಂ ಮಾಂಸಾಹಾರ ತಿಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯನ್ಬು ಭೇಟಿ ಮಾಡಿ ಪ್ರಸಾದ ಕೂಡಾ ಸೇವಿಸಿದ್ದಾರೆ. ಮಾಂಸಹಾರ ಸೇವಿಸಿ ಮಠಕ್ಕೆ ಭೇಟಿ ಕೊಡಬಹುದೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದರು.

ಇದನ್ನೂ ಓದಿ: ಮಂಗಳೂರು: ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ – Vishwanews24

ಉಡುಪಿಯ ಶಾಸಕರೂ ಜೊತೆಗಿದ್ದರು‌ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಿಗೆ ಇದು ಸರಿಕಾಣುತ್ತದಾ ಎಂದು ರಮೆಶ್ ಕಾಂಚನ್ ಪ್ರಶ್ನಿಸಿದ್ದರು. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಇಂದು ಉತ್ತರಿಸಿದ ಶಾಸಕ ರಘುಪತಿ ಭಟ್ ಗೋವಾ ಸಿಎಂ ಮಾಂಸಾಹಾರ ಮಾಡಿರಲಿಲ್ಲ. ಕೇವಲ ಸಿಬ್ಬಂದಿಗಳು ಮಾಡಿದ್ದರು ಎಂದು ಉತ್ತರಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago