ಉಡುಪಿ: ಬ್ರಹ್ಮಾವರ ಕುಂಜಾಲು ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಕುಂಜಾಲು ರಾಮ ಮಂದಿರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಭೆ ನಡೆಸಿ ಅಮಾನುಷ ಕೃತ್ಯ ನಡೆಸಿದ ವ್ಯಕ್ತಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಘಟನೆಯ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಪೊಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಈ ಹಿಂದೆಯೂ ಬ್ರಹ್ಮಾವರ ಪರಿಸರದಲ್ಲಿ ಇದೇ ರೀತಿ ಘಟನೆಗಳು ಈ ಹಿಂದೆ ನಡೆದರೂ ಪೊಲೀಸ್ ಇಲಾಖೆ ಯಾವುದೇ ವ್ಯಕ್ತಿಗಳನ್ನು ಬಂಧಿಸಿಲ್ಲ. ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಗೋ ಕಳ್ಳತನ ಜಾಲವನ್ನು ತಕ್ಷಣ ಪತ್ತೆಹಚ್ಚಿ ಮಟ್ಟ ಹಾಕುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಕರಾವಳಿ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಈ ಘಟನೆಯನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಾಳಿ ತಕ್ಷಣ ಕ್ರಮ ಕೈಗೊಳ್ಳಬೇಕು. ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುವ ಮನಸ್ಥಿತಿಯನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು.
ಘಟನೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಣ್ಣೊರೆಸುವ ತಂತ್ರ ಮಾಡುತ್ತಿದ್ದು, ಹಿಂದೂಗಳ ಪಾಲಿನ ಗೋಮಾತೆಯ ಬಗ್ಗೆ ನೈಜ ಕಾಳಜಿ ಇದ್ದಲ್ಲಿ ಕೊಡಲೇ ರಾಜ್ಯದ ಗೃಹ ಸಚಿವರಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ದುಷ್ಕರ್ಮಿಗಳ ಬಂಧನಕ್ಕೆ ಅಗ್ರಹಿಸಲಿ, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಘಟನೆಯನ್ನು ಒಕ್ಕೊರಲಿ ನಿಂದ ಖಂಡಿಸಲಿ ಎಂದು ಸವಾಲು ಹಾಕಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್, ಹಿಂದೂ ಸಂಘಟನೆಯ ಪ್ರಮುಖರಾದ ದಿನೇಶ್ ಮೆಂಡನ್, ಮಹೇಶ್ ಬೈಲೂರು, ರತ್ನಾಕರ ಅಮೀನ್, ಬಿಜೆಪಿ ಮುಖಂಡರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ನಿಶಾನ್ ರೈ, ಗೌತಮ್ ಅಗ್ರಹಾರ, ಮನೋಜ್ ಕುಮಾರ್ ಶೆಟ್ಟಿ, ಗುರುರಾಜ್ ರಾವ್, ಗಣೇಶ್ ಕುಲಾಲ್, ಆದರ್ಶ ಶೆಟ್ಟಿ ಕೆಂಜೂರು, ಮಹೇಂದ್ರ ನೀಲಾವರ, ಹರೀಶ್ ಶೆಟ್ಟಿ ಚೇರ್ಕಾಡಿ, ಎಸ್. ನಾರಾಯಣ, ರಾಘವೇಂದ್ರ ಕುಂದರ್, ಧನಂಜಯ ಅಮೀನ್, ಸುನೀಲ್ ಕೊಕ್ಕರ್ಣೆ, ಅಕ್ಷೇಂದ್ರ, ರಮಾನಂದ ಶೆಟ್ಟಿ ಕೆಂಜೂರು, ಉಮೇಶ್ ನಾಯ್ಕ್, ಸುರೇಶ್ ಪೇತ್ರಿ, ದೇವಾನಂದ, ಶ್ರೀಮತಿ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…