ಉಡುಪಿ : ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಏಕರೂಪದ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಗೋಮಾತೆಯ ಗೌರವದ ಅಭಿಯಾನದ ಅಂಗವಾಗಿ ಜುಲೈ 27ರಂದು ಉಡುಪಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀಕ್ಷೇತ್ರ ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀಸಾಯಿ ಈಶ್ವರ್ ಗುರೂಜಿ ತಿಳಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾತೆಗೆ ರಾಷ್ಟ್ರ ತಾಯಿ, ರಾಷ್ಟ್ರೀಯ ದೇವರು ಹಾಗೂ ರಾಷ್ಟ್ರೀಯ ಪರಂಪರೆ ಎಂಬ ಗೌರವ ನೀಡಬೇಕೆಂಬ ಉದ್ದೇಶದಿಂದ ದೇಶಾದ್ಯಂತ ನಾಲ್ಕು ಹಂತಗಳಲ್ಲಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತಾಲೂಕು ಮಟ್ಟದಲ್ಲಿ ನಡೆದ ಮೊದಲ ಹಂತದ ಸಹಿ ಸಂಗ್ರಹ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಪ್ರಸ್ತುತ ಜಿಲ್ಲಾಮಟ್ಟದ ಎರಡನೇ ಹಂತದ ಅಭಿಯಾನ ನಡೆಯುತ್ತಿದೆ. ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಪ್ರಚಾರಕರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.
ಜುಲೈ 27ರಂದು ಬೆಳಗ್ಗೆ 10.30ಕ್ಕೆ ಜಿಲ್ಲೆಯ ಏಳು ತಾಲೂಕುಗಳ ಗೋಪ್ರೇಮಿಗಳು, ಗೋರಕ್ಷಕರು ಹಾಗೂ ಭಕ್ತರು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮನವಿಯನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ಅಭಿಯಾನದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಂಚಾಲಕ ಗಜೇಂದ್ರ ಎಸ್. ಬೇಲೆಮನೆ, ನಾಗರಾಜ್ ಪೂಜಾರಿ ಅವರ ಸಹಕಾರದೊಂದಿಗೆ ಕರಾವಳಿ ಭಾಗದಲ್ಲಿ ಕರಪತ್ರ ವಿತರಣೆ ಹಾಗೂ ಸಹಿ ಸಂಗ್ರಹ ಅಭಿಯಾನ ಈಗಾಗಲೇ ಆರಂಭಗೊಂಡಿದ್ದು, ಮೂರು ಲಕ್ಷ ಜನರ ಸಹಿ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಅಕ್ಟೋಬರ್ನಲ್ಲಿ ರಾಜ್ಯಮಟ್ಟದ ಅಭಿಯಾನ ಹಾಗೂ 2027ರ ಜನವರಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಮಟ್ಟದ ಅಭಿಯಾನ ಆಯೋಜಿಸಲಾಗುವುದು.
2027ರ ಫೆಬ್ರುವರಿ 27ರೊಳಗೆ ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೊಳಿಸದಿದ್ದಲ್ಲಿ 108 ಸಾಧು-ಸಂತರು ದೆಹಲಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ತಾಲೂಕು ಸಂಚಾಲಕ ವಿಜಯ ಕೊಡವೂರು, ನಾಗರಾಜ್ ಪೂಜಾರಿ ಬೈಂದೂರು ಹಾಗೂ ಶ್ರೀಮಠದ ಸತೀಶ್ ಉಪಸ್ಥಿತರಿದ್ದರು.
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…
ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು ಮಲಪ್ಪುರಂ: ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ…