ಉಡುಪಿ : ಕೆಲವು ತಾಂತ್ರಿಕ ಕಾರಣಗಳಿಗಾಗಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಈವರೆಗೆ ಬಿಡುಗಡೆಯಾಗಿರಲಿಲ್ಲ. ಜೂನ್ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದೆ. ಗಣೇಶ-ಗೌರಿ ಹಬ್ಬ ಮೊದಲು ಜೂನ್-ಜುಲೈ ತಿಂಗಳ ಹಣ ಎಲ್ಲರ ಖಾತೆಗೂ ಸಂದಾಯವಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿ ಪೊಲೀಸ್ ಇಲಾಖೆಯ ಸಿಸಿಟಿವಿಯ ಶ್ಯೇನ ದೃಷ್ಟಿ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.
ಈವರೆಗೆ ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ. ಹಣ ಬಿಡುಗಡೆಯಾಗಿ ಸರಿಸುಮಾರು ಐದಾರು ದಿನಗಳಾಗಿವೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ. ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…