Featured

ಉಡುಪಿ : ಗ್ಯಾಂಗ್ ವಾರ್ ಪ್ರಕರಣ  – ರಾತ್ರಿ 10 ಗಂಟೆಯಿಂದ ಮಣಿಪಾಲ ಬಂದ್  : ಎಸ್ಪಿ ಡಾ.ಕೆ.ಅರುಣ್ – vishwanews24

ಉಡುಪಿ ಗ್ಯಾಂಗ್ ವಾರ್ ಪ್ರಕರಣ – ರಾತ್ರಿ 10 ಗಂಟೆಯಿಂದ ಮಣಿಪಾಲದ ಹೊಟೇಲ್ ಬಾರ್ ಸೇರಿದಂತೆ ಎಲ್ಲ ಅಂಗಡಿ  ಬಂದ್ : ಎಸ್ಪಿ ಡಾ.ಕೆ.ಅರುಣ್

ಉಡುಪಿ : ಉಡುಪಿಯ ನಡುಬೀದಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆಯಲ್ಲಿ ಮಾದಕ ದ್ರವ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಣಿಪಾಲದಲ್ಲಿ ರಾತ್ರಿ 10ಗಂಟೆಯಿಂದ ಹೊಟೇಲ್ ಬಾರ್ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೂಚಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಮಣಿಪಾಲದ ಬಾರ್, ಹೊಟೇಲ್, ಅಂಗಡಿ ಮಾಲಕರಿಗೆ ರಾತ್ರಿ 10ಗಂಟೆಯೊಳಗೆ ಅಂಗಡಿ ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಬುಧವಾರ ರಾತ್ರಿ ಭಾಗಃಶ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದವು. ಆದರೆ ಕೆಲವು ಬಾರ್‌ಗಳು ರಾತ್ರಿ 11ಗಂಟೆಯವರೆಗೂ ತೆರೆದಿರುವುದು ಕಂಡುಬಂದವು.

‘ಮಣಿಪಾಲದ ಎಲ್ಲ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿಸಿ ಡ್ರಗ್ಸ್ ಗಾಂಜಾ ಸೇರಿದಂತೆ ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ನಡೆಸಲಾಗು ವುದು. ಮಣಿಪಾಲದಲ್ಲಿ ಈ ರೀತಿ ಕಾರ್ಯಾಚರಣೆ ಮಾಡಿದರೆ ಡ್ರಗ್ಸ್ ದಂಧೆಯ ಮೂಲಗಳ ಬಗ್ಗೆ ಮಾಹಿತಿ ಸಿಗಲಿದೆ. ಅದರಂತೆ ಮುಂದೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

‘ಈಗಾಗಲೇ ಬಾರ್, ಹೊಟೇಲ್, ಅಂಗಡಿಗಳ ಮಾಲಕರನ್ನು ಸೂಚನೆ ನೀಡಲಾಗಿದೆ. ಬುಧವಾರ ರಾತ್ರಿ ಕೆಲವರು 10ಗಂಟೆಗೆ ಬಂದ್ ಮಾಡುವ ಬಗ್ಗೆ ಪೊಲೀಸರೊಂದಿಗೆ ವಾದ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಇಂದು ರಾತ್ರಿಯಿಂದ ಎಲ್ಲ ಬಂದ್ ಮಾಡಲಿದ್ದಾರೆ. ಸದ್ಯ ಮಣಿಪಾಲದಲ್ಲಿ ಮಾತ್ರ ಬಂದ್ ಇರುತ್ತದೆ. ಉಡುಪಿಯಲ್ಲಿ ಯಾವುದೇ ರೀತಿಯ ಬಂದ್ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

35 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

53 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

1 hour ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

2 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago