ಉಡುಪಿ : ಉಡುಪಿಯ ನಡುಬೀದಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆಯಲ್ಲಿ ಮಾದಕ ದ್ರವ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಣಿಪಾಲದಲ್ಲಿ ರಾತ್ರಿ 10ಗಂಟೆಯಿಂದ ಹೊಟೇಲ್ ಬಾರ್ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೂಚಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮಣಿಪಾಲದ ಬಾರ್, ಹೊಟೇಲ್, ಅಂಗಡಿ ಮಾಲಕರಿಗೆ ರಾತ್ರಿ 10ಗಂಟೆಯೊಳಗೆ ಅಂಗಡಿ ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಬುಧವಾರ ರಾತ್ರಿ ಭಾಗಃಶ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದವು. ಆದರೆ ಕೆಲವು ಬಾರ್ಗಳು ರಾತ್ರಿ 11ಗಂಟೆಯವರೆಗೂ ತೆರೆದಿರುವುದು ಕಂಡುಬಂದವು.
‘ಮಣಿಪಾಲದ ಎಲ್ಲ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿಸಿ ಡ್ರಗ್ಸ್ ಗಾಂಜಾ ಸೇರಿದಂತೆ ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ನಡೆಸಲಾಗು ವುದು. ಮಣಿಪಾಲದಲ್ಲಿ ಈ ರೀತಿ ಕಾರ್ಯಾಚರಣೆ ಮಾಡಿದರೆ ಡ್ರಗ್ಸ್ ದಂಧೆಯ ಮೂಲಗಳ ಬಗ್ಗೆ ಮಾಹಿತಿ ಸಿಗಲಿದೆ. ಅದರಂತೆ ಮುಂದೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
‘ಈಗಾಗಲೇ ಬಾರ್, ಹೊಟೇಲ್, ಅಂಗಡಿಗಳ ಮಾಲಕರನ್ನು ಸೂಚನೆ ನೀಡಲಾಗಿದೆ. ಬುಧವಾರ ರಾತ್ರಿ ಕೆಲವರು 10ಗಂಟೆಗೆ ಬಂದ್ ಮಾಡುವ ಬಗ್ಗೆ ಪೊಲೀಸರೊಂದಿಗೆ ವಾದ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಇಂದು ರಾತ್ರಿಯಿಂದ ಎಲ್ಲ ಬಂದ್ ಮಾಡಲಿದ್ದಾರೆ. ಸದ್ಯ ಮಣಿಪಾಲದಲ್ಲಿ ಮಾತ್ರ ಬಂದ್ ಇರುತ್ತದೆ. ಉಡುಪಿಯಲ್ಲಿ ಯಾವುದೇ ರೀತಿಯ ಬಂದ್ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…