ಉಡುಪಿ : ಉಡುಪಿಯ ನಡುಬೀದಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆಯಲ್ಲಿ ಮಾದಕ ದ್ರವ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಣಿಪಾಲದಲ್ಲಿ ರಾತ್ರಿ 10ಗಂಟೆಯಿಂದ ಹೊಟೇಲ್ ಬಾರ್ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೂಚಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮಣಿಪಾಲದ ಬಾರ್, ಹೊಟೇಲ್, ಅಂಗಡಿ ಮಾಲಕರಿಗೆ ರಾತ್ರಿ 10ಗಂಟೆಯೊಳಗೆ ಅಂಗಡಿ ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಬುಧವಾರ ರಾತ್ರಿ ಭಾಗಃಶ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದವು. ಆದರೆ ಕೆಲವು ಬಾರ್ಗಳು ರಾತ್ರಿ 11ಗಂಟೆಯವರೆಗೂ ತೆರೆದಿರುವುದು ಕಂಡುಬಂದವು.
‘ಮಣಿಪಾಲದ ಎಲ್ಲ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿಸಿ ಡ್ರಗ್ಸ್ ಗಾಂಜಾ ಸೇರಿದಂತೆ ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ನಡೆಸಲಾಗು ವುದು. ಮಣಿಪಾಲದಲ್ಲಿ ಈ ರೀತಿ ಕಾರ್ಯಾಚರಣೆ ಮಾಡಿದರೆ ಡ್ರಗ್ಸ್ ದಂಧೆಯ ಮೂಲಗಳ ಬಗ್ಗೆ ಮಾಹಿತಿ ಸಿಗಲಿದೆ. ಅದರಂತೆ ಮುಂದೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
‘ಈಗಾಗಲೇ ಬಾರ್, ಹೊಟೇಲ್, ಅಂಗಡಿಗಳ ಮಾಲಕರನ್ನು ಸೂಚನೆ ನೀಡಲಾಗಿದೆ. ಬುಧವಾರ ರಾತ್ರಿ ಕೆಲವರು 10ಗಂಟೆಗೆ ಬಂದ್ ಮಾಡುವ ಬಗ್ಗೆ ಪೊಲೀಸರೊಂದಿಗೆ ವಾದ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಇಂದು ರಾತ್ರಿಯಿಂದ ಎಲ್ಲ ಬಂದ್ ಮಾಡಲಿದ್ದಾರೆ. ಸದ್ಯ ಮಣಿಪಾಲದಲ್ಲಿ ಮಾತ್ರ ಬಂದ್ ಇರುತ್ತದೆ. ಉಡುಪಿಯಲ್ಲಿ ಯಾವುದೇ ರೀತಿಯ ಬಂದ್ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…