ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.
ಇದನ್ನೂ ಓದಿ:
ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಇದು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…