Featured

ಉಡುಪಿ:  ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ : ಜಯಪ್ರಕಾಶ್ ಹೆಗ್ಡೆ – Vishwanews24

ಉಡುಪಿ:  ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ : ಜಯಪ್ರಕಾಶ್ ಹೆಗ್ಡೆ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗಳಿಗೆ ತಲುಪಿದ್ದು ಇದರಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. ಪ್ರತಿ ತಿಂಗಳು ಮನೆಯ ಗೃಹಿಣಿಯರು, ಯುವಕರು, ವಿದ್ಯಾರ್ಥಿಗಳಿಗೆ ಇದರಿಂದ ಸಹಕಾರಿಯಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಶುಕ್ರವಾರ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕೋಟತಟ್ಟು, ಸಾಲಿಗ್ರಾಮ ಪಟ್ಟಣ ಪಂಚಾಯತ್, ಕೋಡಿ, ಪಾಂಡೇಶ್ವರ, ಐರೋಡಿ ಭಾಗದಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಮೊದಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿಗರು ಧರಣಿ ನಡೆಸಿದರು. ಜಾರಿಗೆ ತಂದ ಬಳಿಕ ರಾಜ್ಯ ದಿವಾಳಿಯಾಗುತ್ತಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ. ದೇಶದ ವಿವಿಧ ಉದ್ಯಮಿಗಳ ಕೋಟ್ಯಾಂತರ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ದೇಶ ದಿವಾಳಿಯಾಗುವುದಿಲ್ಲವೇ ಎಂದವರು ಪ್ರಶ್ನಿಸಿದರು.

ತಾನು ಮೀನುಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಕೂಡ ಅದೇ ಖಾತೆಯನ್ನು ನಿರ್ವಹಿಸಿ ದ್ದರು. ಜನರು ಮತ್ತು ಕಾರ್ಯಕರ್ತರು ಇಬ್ಬರ ಕೆಲಸವನ್ನು ತುಲನೆ ಮಾಡಿನೋಡಬೇಕಿದೆ. ನಿರಂತರವಾಗಿ ನಡೆಯುವ ಕಾರ್ಯಕ್ರಮ ಯಾರು ಕೂಡ ಸಚಿವರಾಗಿ ಮಾಡಬಹುದು. ಆದರೆ ಮೀನುಗಾರರಿಗೆ ಹೊಸ ಯೋಜನೆಗಳನ್ನು ತರುವುದರ ಮೂಲಕ ಅಭಿವೃದ್ಧಿ ಮಾಡುವುದು ಮುಖ್ಯ. ಆ ಕೆಲಸವನ್ನು ನಾನು ನನ್ನ ಸಚಿವ, ಸಂಸದ ಮತ್ತು ಶಾಸಕ ಅವಧಿಯಲ್ಲಿ ಮಾಡಿದ್ದು ಕಾರ್ಯಕರ್ತರು ಈ ವಿಚಾರವನ್ನು ಮತದಾರರಿಗೆ ಮನಮುಟ್ಟುವಂತೆ ಹೇಳಬೇಕಾದ ಅಗತ್ಯತೆ ಇದೆ ಎಂದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago