Featured

ಉಡುಪಿ : ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮ: ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮ: ರಮೇಶ್ ಕಾಂಚನ್

ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ  ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನಮ್ಮ ನಡಿಗೆ ವಾರ್ಡ್ ಕಡೆಗೆಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 35 ವಾರ್ಡ್ಗಳಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸದಸ್ಯರು ಮತ್ತು ಅಧಿಕಾರಿಗಳು ಮುಂದಾಗಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು

ಅವರು ಇಂದು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಉಡುಪಿ ತಾಲೂಕಿನ 16 ಗ್ರಾಮ ಪಂಚಾಯತ್ಗಳಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಕಾರ್ಯಕ್ರಮ ಪೂರ್ಣಗೊಂಡಿದ್ದು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಡೆದಿರುವ ಬಗ್ಗೆ ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರ್ಡ್ವಾರು ಪರಿಶೀಲನೆ ನಡೆಸಿ ಯೋಜನೆಗಳ ಅನುಷ್ಠಾನದಲ್ಲಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದರು

ಜಿಲ್ಲೆಯಲ್ಲಿ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಜುಲೈ ತಿಂಗಳಿನವರೆಗೆ ರೂ.1,67,57,30,000 ನಗದು ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಉಳಿದ ಕಂತುಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಿಲಾಗಿದ್ದು ಆಗಸ್ಟ್ ತಿಂಗಳಿನಿA ಬಾಕಿ ಇರುವ ಕಂತುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಗ್ಯಾರಂಟಿ ಯೋಜನೆಯ ಅರ್ಹತೆ ಹೊಂದಿದ್ದು, ಆದಾಯ ತೆರಿಗೆ ಮತ್ತು ಜಿ ಎಸ್ ಟಿ ನೋಂದಣಿ ಕಾರಣಗಳಿಂದ ಯೋಜನೆಯ ನೆರವು ಸಿಗುತ್ತಿಲ್ಲ ಬಗ್ಗೆ ಜಿಲ್ಲೆಯಿಂದ ರಾಜ್ಯಕ್ಕೆ ಪ್ರಸ್ತಾವನೆ ಕಳುಹಿಸಿ ಇಂತಹ ಫಲಾನುಭವಿ ಗಳಿಗೆ ವಿನಾಯತಿ ಪಡೆದು ಕೊಳ್ಳಬೇಕು ಮತ್ತು ಕುಟುಂಬ ಆಪ್ನಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ಯೋಜನೆಗೆ ಹೆಚ್ಚಿನ ಪ್ರಚಾರ ನೀಡುವ ನಿಟ್ಟಿನಲ್ಲಿ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಫಲಕಗಳನ್ನು ಅಳವಡಿಸಬೇಕು ಎಂದರು

ಗೃಹ ಜ್ಯೋತಿ ಯೋಜನೆಯಡಿ ಸರಾಸರಿ ಪ್ರತಿ ತಿಂಗಳಿಗೆ 59983 ಫಲಾನುಭವಿಗಳಿಗೆ 36408 ಶೂನ್ಯ ಬಿಲ್ ಬರುತ್ತಿದ್ದು 5,48,23,843 ಕೋಟಿ ರೂ ಅನುದಾನದ ಲಾಭ ಪಡೆಯಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳಿಮದ ಮಾಹಿತಿ ಪಡೆದು ಮಾತನಾಡಿ, ಗ್ರಾಹಕರಿಗೆ 5-6 ತಿಂಗಳಿಗೊಮ್ಮೆ ವಿದ್ಯುತ್ ಬಿಲ್ ಬರುತ್ತಿದ್ದು ಪ್ರತಿ ತಿಂಗಳ ಬಿಲ್ ಆಯಾ ತಿಂಗಳಿನಲ್ಲಿ ನೀಡಬೇಕು. ಕೆಲವೊಂದು ಕಡೆ ನಿಗದಿತ ಯುನಿಟ್ ಗಿಂತಲು ಕಡಿಮೆ ವಿದ್ಯುತ್ ಬಳಕೆಯಾಗಿದ್ದರೂ ಬಿಲ್ ಬರುವ ಬಗ್ಗೆ ಸದಸ್ಯರು ಸಭೆಗೆ ತಿಳಿಸಿದಾಗ ರೀತಿ ಸಮಸ್ಯೆಗಳಾದಾಗ ಅಧಿಕಾರಿಗಳು ಮುತುವರ್ಜಿ ವಹಿಸಿ ಸಮಸ್ಯೆ ಬಗೆಹರಿಸ ಬೇಕು ಎಂದರು

ಯುವನಿಧಿ ಯೋಜನೆಯಡಿ 778 ಯುವಕರು ನೋಂದಣಿ ಯಾಗಿದ್ದು 622 ಫಲಾನುಭವಿಗಳಿಗೆ 1,53,37,500 ಅಂದಾಜು ಮೊತ್ತ ಪಾವತಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು ಸ್ಪಂದಿಸಿದ ಅಧ್ಯಕ್ಷರು ಉದ್ಯೋಗ ಅರಸುವ ಯುವಕರು ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಸಹಾಯ ಒದಗಿಸಲು ಯೋಜನೆ ತರಲಾಗಿದೆ ಇದಕ್ಕೆ ಹೆಚ್ಚಿನ ಪ್ರಚಾರ ನೀಡಬೇಕು. ಮುಂದಿನ ದಿನಗಳಲ್ಲಿ ನರ್ಸಿಂಗ್ ಕಾಲೇಜು ಗಳಲ್ಲಿ ಸಮಾವೇಶ ನಡೆಸಿ ಯೋಜನೆ ಬಗ್ಗೆ ಮಾಹಿತಿ ನೀಡಬೇಕೆಂದರು.

ಶಕ್ತಿ ಯೋಜನೆಯಡಿ ಅಕ್ಟೋಬರ್ ಮಾಹೆ ವರೆಗೆ 31756767 ವಯಸ್ಕ, 560631 ಮಕ್ಕಳು ಪ್ರಯಾಣಿಸಿದ್ದು 1257128685 ರೂ ಲಾಭ ಪಡೆದಿದ್ದಾರೆ. ಕೊರೊನಾ ಕಾಲದಲ್ಲಿ ಸ್ಥಗಿತವಾಗಿರುವ ಮಾರ್ಗಗಳಲ್ಲಿ ಬಸ್ಗಳ ಪುನರಾರಂಭಕ್ಕೆ ಜನರಿಂದ ಬೇಡಿಕೆ ಇದೆ. ಈಗಾಗಲೇ 12 ಬಸ್ಗಳ ಪರ್ಮಿಟ್ಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರಕಾರದಿಂದ ಅನುಮತಿ ಬಂದ ಕೂಡಲೇ ಹೆಚ್ಚುವರಿ ಬಸ್ಗಳನ್ನು ಬಿಡಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದ್ದು 94.02% ವಿತರಣೆ ಪ್ರಗತಿ ಯಲ್ಲಿದೆ. ಪಡಿತರ ಚೀಟಿಯಲ್ಲಿ ತಿದ್ದುಪಡಿಗಳಿದ್ದರೆ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಬೇಕು. ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಸಮಸ್ಯೆ ಗಳಿದ್ದರೆ ಅಧ್ಯಕ್ಷರ ಗಮನಕ್ಕೆ ತಂದಲ್ಲಿ ಪರಿಹರಿಸಲಾಗುವುದು ಎಂದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರುಗಳಾದ ಪ್ರೇಮಲತಾ ಸೋನ್ಸ್, ಅರ್ಚನಾ ದೇವಾಡಿಗ, ಮಾಲತಿ ಬಿ ಆಚಾರ್ಯ, ವೆಂಕಟೇಶ್ ಸುವರ್ಣ, ಉಸ್ತಾದ್ ಸಾದಿಕ್ ತೋನ್ಸೆ,ಸುಧಾಕರ್ ಪೂಜಾರಿ, ಗಣೇಶ್,ಶಬರೀಶ್ ಸುವರ್ಣ, ಸಂತೋಶ್ ಶೆಟ್ಟಿ ಹಾಗೂ ಮತ್ತಿತರ ಸಂಬAಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago