ಉಡುಪಿ,: ಇಂಧನ, ಗ್ಯಾಸ್ ಬೆಲೆ ಗಗನಕ್ಕೇರುತ್ತಿದೆ. ಆದರೆ ಈಗ ಸಂಸದೆ ಶೋಭಾ ಕರಂದ್ಲಾಜೆಯಾಗಲಿ, ಲೋಕಸಭೆ ಸದಸ್ಯರು ಯಾರು ಮಾತನಾಡುತ್ತಿಲ್ಲ. ಮಲ್ಪೆ- ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ ಏರಿ ಏಳು ವರ್ಷಗಳೇ ಕಳೆದಿವೆ ಆದರೆ ಇಲ್ಲಿಗೆ ಬಂದ ಅನುದಾನ ಬೇರೆ ಕಡೆಗೆ ವಿನಿಯೋಗ ಆಗ್ತಿದೆ. ಕೇವಲ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಟೀಕಿಸಿದ್ದಾರೆ.
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಅನ್ವಯವಾಗುವಂತೆ, ನಾವು ಜನಸಂಪರ್ಕ ಸಭೆಯನ್ನು ನಡೆಸಿ ಜನಾಭಿಪ್ರಾಯ ಕಲೆ ಹಾಕಿ ಒಂದು ವರದಿ ತಯಾರಿಸಿದ್ದೆವು. ಆದರೆ ಅದನ್ನು ಕಸದ ಬುಟ್ಟಿಗೆ ಎಸೆದರು. ಕಸ್ತೂರಿ ರಂಗನ್ ವರದಿಯಿಂದಾಗಿ ರಾಜ್ಯದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಯಿತು.
ಕಾಂಗ್ರೆಸ್ ಆಡಳಿತದಲ್ಲಿರುವಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೃಷಿ ಕಾರ್ಮಿಕರಿಗೆ ಭೂಮಿ, ಕುಡಿಯುವ ನೀರಿನ ವ್ಯವಸ್ಥೆಗೆ ಸ್ವಜಲಧಾರೆ ಯೋಜನೆ, ಬಡವರಿಗೆ ಬಿಪಿಎಲ್ ಕಾರ್ಡ್, ಬಡಗುಬೆಟ್ಟುವಿನಲ್ಲಿ ಒಂದು ಕೋಟಿ ರೂಪಾಯಿಯ ಟ್ರೀ ಪಾರ್ಕ್ ಹೀಗೆ ಅನೇಕ ಯೋಜನೆಯನ್ನು ಹಮ್ಮಿಕೊಂಡು ಅತೀ ಹೆಚ್ಚು ಅನುದಾನವನ್ನು ಜಿಲ್ಲೆಗೆ ಪಡೆದು ಕೊಂಡಿದ್ದೆವು ಎಂದು ಸೊರಕೆ ನೆನಪಿಕೊಂಡರು.
ಪಾದಯಾತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎ. ಗೂರ್, ಕಾರ್ಯದರ್ಶಿ ರಾಜಶೇಖರ್ ಕೋಟ್ಯಾನ್, ಉಡುಪಿ ತಾಪಂ ಸದಸ್ಯೆ ಡಾ. ಸುನೀತಾ ಶೆಟ್ಟಿ, ಕೀರ್ತಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭೆ ಸದಸ್ಯ ರಮೇಶ್ ಕಾಂಚನ್, ಯತೀಶ್ ಕರ್ಕೇರ, ಶಶಿಧರ ಶೆಟ್ಟಿ ಎಲ್ಲೂರು, ಅಲೆವೂರು ಹರೀಶ್ ಕಿಣಿ, ಕಾಪು ಬ್ಲಾಕ್ ಕಾಂಗ್ರೆಸ್(ಉತ್ತರ ವಲಯ) ಅಧ್ಯಕ್ಷ ಪ್ರವೀಣ್ ಶೆಟ್ಟಿ, ಶಾಂತಾರಾಮ ಸೂಡ, ನವೀನ್ಚಂದ್ರ ಶೆಟ್ಟಿ, ಲಕ್ಷ್ಮೀನಾರಾಯಣ ಪ್ರಭು, ಉದ್ಯಾವರ ನಾಗೇಶ್ ಕುಮಾರ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಸಾಲ್ಯಾನ್ , ರೋಶನಿ ಒಲಿವೆರಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಮುಂತಾದವರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…