ಉಡುಪಿ: ಇರಾನ್ ಮತ್ತು ಅಮೆರಿಕಾ ಯುದ್ದದಿಂದಾಗಿ ಉಂಟಾಗಿರುವ ಎಲ್ ಪಿಜಿ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು ಇದೀಗ ಗ್ಯಾಸ್ ಸಂಬಂಧಿಸಿದಂತೆ ಮೆಸೆಜ್ ಗಳನ್ನು ಕಳುಹಿಸಿ ಸೈಬರ್ ವಂಚನೆ ಪ್ರಾರಂಭಿಸಿದ್ದಾರೆ. ಅದೇ ರೀತಿ ಉಡಪಿಯಲ್ಲಿ ಇತ್ತೀಚೆ ಎರಡು ಪ್ರಕರಣಗಳು ಬೆಳಕಿಗೆ ಬಂದಿದೆ.
ಕೇವಲ ₹20 ಗ್ಯಾಸ್ ಬಿಲ್ ಬಾಕಿ ಇದೆ ಎಂದು ನಂಬಿಸಿ, ವೃದ್ಧ ದಂಪತಿಗಳ ಬ್ಯಾಂಕ್ ಖಾತೆಯಿಂದ ಸುಮಾರು ₹9.78 ಲಕ್ಷ ಹಣವನ್ನು ಲೂಟಿ ಮಾಡಿರುವ ಘಟನೆ ನಗರದ ಶಿವಳ್ಳಿಯಲ್ಲಿ ನಡೆದಿದೆ. ಶಿವಳ್ಳಿಯ ನಿವಾಸಿ ರವಿದಾಸ್ ರಾಘವೇಂದ್ರ ನಾಯಕ್ ಅವರಿಗೆ ಮಾರ್ಚ್ 17ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಗ್ಯಾಸ್ ಬಿಲ್ ₹20 ಬಾಕಿ ಇದೆ ಎಂದು ತಿಳಿಸಿದ್ದಾನೆ. ಬಳಿಕ ವಾಟ್ಸಾಪ್ ಮೂಲಕ ‘Mahangar Gas Bill Update.apk’ ಎಂಬ ಲಿಂಕ್ ಕಳುಹಿಸಿ, ಅದನ್ನು ಡೌನ್ಲೋಡ್ ಮಾಡುವಂತೆ ಸೂಚಿಸಿದ್ದಾನೆ. ರವಿದಾಸ್ ಅವರು ಆ ಲಿಂಕ್ ಒತ್ತಿದ ತಕ್ಷಣ ಅವರ ಫೋನ್ ಹ್ಯಾಕ್ ಆಗಿದೆ.
ಇದನ್ನೂ ಓದಿ:
ಬಿಲ್ ಪಾವತಿಯಾಗಿಲ್ಲ ಎಂಬ ನೆಪವೊಡ್ಡಿ ಆರೋಪಿಯು ದಂಪತಿಗಳ ಬಂಧನ್ ಬ್ಯಾಂಕ್, ಯೆಸ್ ಬ್ಯಾಂಕ್ ಹಾಗೂ ಹೆಚ್ಡಿಎಫ್ಸಿ ಬ್ಯಾಂಕಿನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಿವರಗಳನ್ನು ಪಡೆದುಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಮೂರೂ ಬ್ಯಾಂಕ್ ಖಾತೆಗಳಿಂದ ಒಟ್ಟು ₹9,78,036.50/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಐಟಿ ಆಕ್ಟ್ ಹಾಗೂ ಬಿಎನ್ಎಸ್ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇನ್ನು ಈ ಕುರಿತಂತೆ ಮಾಹಿತಿ ನೀಡಿರುವ ಉಡುಪಿ ಎಸ್ ಪಿ ಸೈಬರ್ ವಂಚನೆಯ ಬಗ್ಗೆ ಎಚ್ಚರಿಕೆಯಿಂದ ಇರಲು ತಿಳಇಸಿದ್ದಾರೆ. ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಅಪರಿಚಿತರಿಂದ ಬರುವ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ತೆರೆಯದೇ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ. ಈ ರೀತಿಯ ವಂಚನೆಗೆ ಈಗಾಗಲೇ ಉಡುಪಿ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಸಂದೇಶಗಳು, ಕರೆಗಳು ಅಥವಾ ಲಿಂಕ್ಗಳ ಬಗ್ಗೆ ಎಚ್ಚರಿಕೆ ವಹಿಸಿ, ಅಧಿಕೃತ ಮೂಲಗಳ ಮೂಲಕವೇ ಗ್ಯಾಸ್ ಬುಕ್ಕಿಂಗ್ ಹಾಗೂ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಎಸ್ಪಿ ಮನವಿ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…