ಉಡುಪಿ : ಗ್ರಾಮಾಂತರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಂದ ಬೃಹತ್ ರಕ್ತದಾನ ಶಿಬಿರ -Vishwanews24
ಉಡುಪಿ : ಗ್ರಾಮಾಂತರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಂದ ಬೃಹತ್ ರಕ್ತದಾನ ಶಿಬಿರ -Vishwanews24
ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸುನೀತಾ ಡಿ.ಸೋಜಾ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ದಿನಾಂಕ 29.8.2021 ರಂದು ಉನ್ನತಿ ಸಭಾಭವನದಲ್ಲಿ “ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ವಿ. ನಾಯ್ಕ್, ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷರಾದ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಗಳಾದ ಶೇಖ್ ಆಶೀಫ್, ಅಲ್ವಿನ್ ಡಿಸೋಜ, ಪ್ರಭಾರಿ ಗಿಲ್ಬರ್ಟ್, ರಾಜಶ್ರೀ ಮಸ್ಕರೇನಸ್, ರೆಡ್ ಕ್ರಾಸ್ ಸಂಸ್ಥೆಯ ಜಯಕರ್ ಶೆಟ್ಟಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸುನೀತ ಡಿಸೋಜಾ ಅವರು ಸ್ವಾಗತಿಸಿ, ಕಾರ್ಯದರ್ಶಿ ರಾಯಲ್ ಡಿಸೋಜಾ ಅವರು ವಂದಿಸಿದರು. 105 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.
