ಉಡುಪಿ : ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನ.23ರಂದು ನಡೆದಿದೆ.
ಉಡುಪಿಯ ಶಿವಳ್ಳಿ ಗ್ರಾಮದ ವಿದ್ಯಾಸಮುದ್ರ ಮಾರ್ಗ ಬಳಿ ಇರುವ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಜ್ಯುವೆಲ್ಲರಿ ಅಂಗಡಿಗೆ ಇಬ್ಬರು ಬುರ್ಖಾ ಧರಿಸಿ ಬಂದಿದ್ದು, ಸೇಲ್ಸ್ ಮೆನ್ ಮೊಹಮ್ಮದ್ ಮುಬಾರಕ್ ಬಳಿ ಚಿನ್ನದ ಬಳೆಗಳನ್ನು ತೋರಿಸುವಂತೆ ಹೇಳಿ, ಬೇರೆ ಬೇರೆ ಬಳೆಗಳನ್ನು ನೋಡುತ್ತಿದ್ದ ಮಹಿಳೆಯರು ಸೇಲ್ಸ್ಮೆನ್ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಮೋಸದಿಂದ ಕಳವುಗೈದಿದ್ದಾರೆ.
ಚಿನ್ನದ ಬಳೆಗಳ ಒಟ್ಟು ಮೌಲ್ಯ 3,00,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…