Featured

ಉಡುಪಿ ಗ್ರಾ. ಪಂ. ಚುನಾವಣೆ : ತಾಲೂಕಿನಾದ್ಯಂತ ಶಾಂತಿಯುತ ಮತದಾನ -Vishwanews24

ಉಡುಪಿ ಗ್ರಾ. ಪಂ. ಚುನಾವಣೆ : ತಾಲೂಕಿನಾದ್ಯಂತ ಶಾಂತಿಯುತ ಮತದಾನ -Vishwanews24

ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆ ಮುಂಜಾನೆಯಿಂದಲೇ ಆರಂಭಗೊಂಡಿದೆ. ತಾಲೂಕಿನಾದ್ಯಂತ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು. ಸುರಕ್ಷತಾ ಕ್ರಮಗಳೊಂದಿಗೆ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಂಜೆ 5 ಗಂಟೆ ವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

ಬೆಳಿಗ್ಗೆ 9 ಗಂಟೆವರೆಗೆ: ಉಡುಪಿ 15.87, ಹೆಬ್ರಿ 15.47, ಬ್ರಹ್ಮವರ 16.49, ಬೈಂದೂರು 11.49. ಒಟ್ಟು 14.37 ಶೇಕಡಾ ಮತದಾನವಾಗಿದೆ.

67 ಗ್ರಾ.ಪಂಗಳಿಗೆ ಮತದಾನ: ಮೊದಲ ಹಂತದ ಚುನಾವಣೆಯ ಮತದಾನಕ್ಕೆ ಕ್ಷಣಗಣಗೆ ಆರಂಭವಾಗಿದ್ದು, 3,70,234 ಮತದಾರರು ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಒಟ್ಟು 560 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಉಡುಪಿ, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲ್ಲೂಕುಗಳ 67 ಗ್ರಾಮ ಪಂಚಾಯಿತಿಗಳ 1,047 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. 2,349 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 1,108 ಮಹಿಳೆಯರು, 149 ಎಸ್‌ಸಿ, 182 ಎಸ್‌ಟಿ, 543 ಹಿಂದುಳಿದ ‘ಅ’ ವರ್ಗ, 132 ಹಿಂದುಳಿದ ‘ಬ’ ವರ್ಗ ಮತ್ತು 1,343 ಸಾಮಾನ್ಯ ಕ್ಷೇತ್ರದ ಸ್ಪರ್ಧಿಗಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago