Featured

ಉಡುಪಿ ಘರ್ಷಣೆಗೆ ಮಾಜಿ ಸಚಿವ ಮಧ್ವರಾಜ್ ಖಂಡನೆ ; ಭಾರತ್ ಬಂದ್ ಗೆ ಉಡುಪಿಯ ಜನತೆಯಿಂದ ಉತ್ತಮ ಸ್ಪಂದನೆ : ಮಧ್ವರಾಜ್

ಉಡುಪಿ, : ಭಾರತ್ ಬಂದ್ ವೇಳೆ ಉಡುಪಿಯಲ್ಲಿ ನಡೆದ ಘರ್ಷಣೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಖಂಡಿಸಿದ್ದಾರೆ. ‘ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರು. ಅಂಗಡಿಗಳಿಗೆ ತೆರಳಿ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಬಿಜೆಪಿಯ ಕಾರ್ಯಕರ್ತರು ನಮ್ಮ ಪ್ರತಿಭಟನೆಗೆ ಅಡ್ಡಿ ಪಡಿಸಿದ್ದಾರೆ. ಮಾತ್ರವಲ್ಲದೆ, ಮುಚ್ಚಿದ್ದ ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ತೆರೆಯಲು ಮುಂದಾಗಿದ್ದಾರೆ ಎಂದರು.

ಇನ್ನು ಪೋಲೀಸರು ಕೂಡ ಕಾಂಗ್ರೆಸ್ ಕಾರ್ಯಕರ್ತರಿಗೆ ಅನಾವಶ್ಯಕವಾಗಿ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಿದರು. ಇದರ ಕುರಿತಾಗಿ ಉಸ್ತುವಾರಿ ಮಂತ್ರಿ ಡಾ| ಜಯಮಾಲ ಹಾಗೂ ಗೃಹಮಂತ್ರಿಗಳಿಗೆ ಮಾಹಿತಿ ನೀಡಲಾಗುವುದು. ಎಸ್ಪಿ ಕಛೇರಿ ಎದುರು ಬಿಜೆಪಿಯವರು ಧರಣಿ ಮಾಡುವ ಅವಶ್ಯಕತೆ ಏನಿತ್ತು? ಎಂದು ಅವರು ಪ್ರಶ್ನಿಸಿದ್ದಾರೆ. ಭಾರತ್ ಬಂದ್ ಗೆ ಉಡುಪಿಯ ಜನತೆ ಉತ್ತಮ ಸ್ಪಂದನೆ ನೀಡಿದ್ದರು.

ಎಲ್ಲಿಯೂ ಬಲವಂತದ ಬಂದ್ ಮಾಡಲಾಗಿಲ್ಲ. ಈ ಹಿಂದೆಯೂ ಶಾಂತಿಯುತ ಪ್ರತಿಭಟನೆಗೆ ಬಿಜೆಪಿಯವರು ಅಡ್ಡಿಪಡಿಸಿದ್ದರು. ನಾವು ಯಾವತ್ತೂ ಅವರ ಪ್ರತಿಭಟನೆಗೆ ಅಡ್ಡಿ ಪಡೆಸಿಲ್ಲ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ್ದು ಖಂಡನೀಯ. ಕಾಂಗ್ರೆಸ್ ನಗರಸಭೆಯ ಕೌನ್ಸಿಲರ್ ರಮೇಶ್ ಕಾಂಚನ್, ವಿಜಯ ಪೂಜಾರಿ ಹಾಗೂ ಕಾರ್ಯಕರ್ತ ಆರ್ ಕೆ ರಮೇಶ್ ಮೇಲೆ ಪೋಲಿಸ್ ದೌರ್ಜನ್ಯ ಮಾಡಿದ್ದು ಖಂಡನೀಯ. ಇಂತಹ ಪ್ರಕ್ಷುಬ್ದ ಸಮಯದಲ್ಲಿ ತಾಳ್ಮೆಯಿಂದ ಇರಬೇಕಾದ ಪೋಲಿಸರೇ ಸಂಯಮ ಕಳೆದು ಕೊಂಡರೆ ಹೇಗೆ ಎಂದು ಮಾಜಿ ಶಾಸಕರು ಪ್ರಶ್ನಿಸಿದರು. ಈ ರೀತಿಯ ಪೊಲೀಸ್ ನಡೆಯ ಬಗ್ಗೆ ತನಿಖೆ ಆಗಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಎಲ್ಲಾದರೂ ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಬಂದ್ ಮಾಡಿದ್ದಾದಲ್ಲಿ ಅದೂ ಕೂಡ ತನಿಖೆಯಾಗಲಿ ಎಂದವರು ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago