Featured

ಉಡುಪಿ ಘರ್ಷಣೆಗೆ ಮಾಜಿ ಸಚಿವ ಮಧ್ವರಾಜ್ ಖಂಡನೆ ; ಭಾರತ್ ಬಂದ್ ಗೆ ಉಡುಪಿಯ ಜನತೆಯಿಂದ ಉತ್ತಮ ಸ್ಪಂದನೆ : ಮಧ್ವರಾಜ್

ಉಡುಪಿ, : ಭಾರತ್ ಬಂದ್ ವೇಳೆ ಉಡುಪಿಯಲ್ಲಿ ನಡೆದ ಘರ್ಷಣೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಖಂಡಿಸಿದ್ದಾರೆ. ‘ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರು. ಅಂಗಡಿಗಳಿಗೆ ತೆರಳಿ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಬಿಜೆಪಿಯ ಕಾರ್ಯಕರ್ತರು ನಮ್ಮ ಪ್ರತಿಭಟನೆಗೆ ಅಡ್ಡಿ ಪಡಿಸಿದ್ದಾರೆ. ಮಾತ್ರವಲ್ಲದೆ, ಮುಚ್ಚಿದ್ದ ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ತೆರೆಯಲು ಮುಂದಾಗಿದ್ದಾರೆ ಎಂದರು.

ಇನ್ನು ಪೋಲೀಸರು ಕೂಡ ಕಾಂಗ್ರೆಸ್ ಕಾರ್ಯಕರ್ತರಿಗೆ ಅನಾವಶ್ಯಕವಾಗಿ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಿದರು. ಇದರ ಕುರಿತಾಗಿ ಉಸ್ತುವಾರಿ ಮಂತ್ರಿ ಡಾ| ಜಯಮಾಲ ಹಾಗೂ ಗೃಹಮಂತ್ರಿಗಳಿಗೆ ಮಾಹಿತಿ ನೀಡಲಾಗುವುದು. ಎಸ್ಪಿ ಕಛೇರಿ ಎದುರು ಬಿಜೆಪಿಯವರು ಧರಣಿ ಮಾಡುವ ಅವಶ್ಯಕತೆ ಏನಿತ್ತು? ಎಂದು ಅವರು ಪ್ರಶ್ನಿಸಿದ್ದಾರೆ. ಭಾರತ್ ಬಂದ್ ಗೆ ಉಡುಪಿಯ ಜನತೆ ಉತ್ತಮ ಸ್ಪಂದನೆ ನೀಡಿದ್ದರು.

ಎಲ್ಲಿಯೂ ಬಲವಂತದ ಬಂದ್ ಮಾಡಲಾಗಿಲ್ಲ. ಈ ಹಿಂದೆಯೂ ಶಾಂತಿಯುತ ಪ್ರತಿಭಟನೆಗೆ ಬಿಜೆಪಿಯವರು ಅಡ್ಡಿಪಡಿಸಿದ್ದರು. ನಾವು ಯಾವತ್ತೂ ಅವರ ಪ್ರತಿಭಟನೆಗೆ ಅಡ್ಡಿ ಪಡೆಸಿಲ್ಲ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ್ದು ಖಂಡನೀಯ. ಕಾಂಗ್ರೆಸ್ ನಗರಸಭೆಯ ಕೌನ್ಸಿಲರ್ ರಮೇಶ್ ಕಾಂಚನ್, ವಿಜಯ ಪೂಜಾರಿ ಹಾಗೂ ಕಾರ್ಯಕರ್ತ ಆರ್ ಕೆ ರಮೇಶ್ ಮೇಲೆ ಪೋಲಿಸ್ ದೌರ್ಜನ್ಯ ಮಾಡಿದ್ದು ಖಂಡನೀಯ. ಇಂತಹ ಪ್ರಕ್ಷುಬ್ದ ಸಮಯದಲ್ಲಿ ತಾಳ್ಮೆಯಿಂದ ಇರಬೇಕಾದ ಪೋಲಿಸರೇ ಸಂಯಮ ಕಳೆದು ಕೊಂಡರೆ ಹೇಗೆ ಎಂದು ಮಾಜಿ ಶಾಸಕರು ಪ್ರಶ್ನಿಸಿದರು. ಈ ರೀತಿಯ ಪೊಲೀಸ್ ನಡೆಯ ಬಗ್ಗೆ ತನಿಖೆ ಆಗಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಎಲ್ಲಾದರೂ ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಬಂದ್ ಮಾಡಿದ್ದಾದಲ್ಲಿ ಅದೂ ಕೂಡ ತನಿಖೆಯಾಗಲಿ ಎಂದವರು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago