ಉಡುಪಿ : ನಗರದ ರಿಕ್ಷಾ ಚಾಲಕ, ಕಾಡುಬೆಟ್ಟು ನಿವಾಸಿ ತಮ್ಮ ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುವಿನಿಂದ ಬಸ್ ನಿಲ್ದಾಣದ ಕಡೆಗೆ ಕರೆದುಕೊಂಡು ಹೋಗುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದ ಘಟನೆ ಇಂದು ನಡೆದಿದೆ.
ರಿಕ್ಷಾ ಚಾಲಕ ಸುರೇಶ ಎಂಬವರು ಕುಸಿದುಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾದಾಗ ಅವರು ಚಲಾಯಿಸುತ್ತಿದ್ದ ರಿಕ್ಷಾವು ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಚಾಲಕ ಸೀಟಿನಲ್ಲಿ ಕುಸಿದು ಬಿದ್ದಿದ್ದ ಸುರೇಶ್ ರವರನ್ನು ಅದೇ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕ ಮತ್ತು ಪ್ರಯಾಣಿಕರು ತಮ್ಮ ರಿಕ್ಷಾದಲ್ಲಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕನ ಸ್ಥಿತಿ ಗಂಭೀರ ವಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…