ಉಡುಪಿ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸವಾರ ಗಂಭೀರ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ನಲ್ಲಿದ್ದ ಅವರ ಪತ್ನಿ ಹಾಗೂ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಮಣಿಪಾಲ ಸಂಸ್ಥೆಯ ಯುನಿಟ್ 5ರ ಉದ್ಯೋಗಿ ಶಶಿಧರ ಶೆಟ್ಟಿ ಗಂಭೀರ ಗಾಯಗೊಂಡವರು.
ಕುಂಜಾರುಗಿರಿ ನಿವಾಸಿಯಾದ ಅವರು ಸೋಮವಾರ ಬೆಳಗ್ಗೆ ಪತ್ನಿ, ಮಗುವಿನೊಂದಿಗೆ ಅಲೆವೂರಿನಿಂದ ಮಣಿಪಾಲದತ್ತ ಬರುತ್ತಿದ್ದ ವೇಳೆ ಕೈಗಾರಿಕಾ ಪ್ರದೇಶದ ಬಸ್ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ. ಮಗುವನ್ನು ಎಲ್ಕೆಜಿಗೆ ಬಿಡಲೆಂದು ಬರುತ್ತಿದ್ದಾಗ ಗಾಳಿ-ಮಳೆ ಬಂದಿದ್ದು, ಈ ವೇಳೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಇವರ ಕುತ್ತಿಗೆಗೆ ಸುತ್ತುವರಿಯಿತು. ಪರಿಣಾಮ ಪತ್ನಿ ಮತ್ತು ಮಗುವಿನ ಸಹಿತ ಅವರು ಕೆಳಗೆ ಬಿದ್ದರು. ತಂತಿ ಬೀಳುವಾಗ ವಿದ್ಯುತ್ ಕಡಿತಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
ಅವರಿಗೆ ಸಿಟಿ ಸ್ಕ್ಯಾನ್ ಮಾಡಲಾಗಿದ್ದು, ಮಂಗಳವಾರ ಎಂಆರ್ಐ ಸ್ಕ್ಯಾನ್ ಮಾಡಲು ಉದ್ದೇಶಿಸಲಾಗಿದೆ. ಕುತ್ತಿಗೆಯಿಂದ ಕೆಳಭಾಗದಲ್ಲಿ ಪ್ರಸ್ತುತ ಸ್ಪರ್ಶ ಜ್ಞಾನ ಇಲ್ಲವಾಗಿದೆ. ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…