ಉಡುಪಿ : ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಅವರಲ್ಲಿದ್ದ 1 ಲ.ರೂ. ಅನ್ನು ಕಸಿದು ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು ಬಸ್ನ ಕಲೆಕ್ಷನ್ ವ್ಯವಹಾರ ಮಾಡಿಕೊಂಡಿದ್ದು, ಜೂ. 20ರಂದು ಬಸ್ನ ಕಲೆಕ್ಷನ್ ಹಣ ವನ್ನು ತೆಗೆದುಕೊಂಡು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ.
ಬಳಿಕ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ.
ಆರೋಪಿಗಳನ್ನು ಶಾರೀಕ್, ಇರ್ಫಾನ್ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್ ನಿಹಾಲ್ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…