Featured

ಉಡುಪಿ :  ಚಿಕಿತ್ಸೆ ನೀಡುತ್ತಿದ್ದ ವೇಳೆ ಹೃದಯಾಘಾತ ; ಜಿಲ್ಲಾ ಆಸ್ಪತ್ರೆ ವೈದ್ಯೆ ಸಾವು – vishwanews24

ಉಡುಪಿ :  ಚಿಕಿತ್ಸೆ ನೀಡುತ್ತಿದ್ದ ವೇಳೆ ಹೃದಯಾಘಾತ – ಜಿಲ್ಲಾ ಆಸ್ಪತ್ರೆ ವೈದ್ಯೆ ಸಾವು

ಉಡುಪಿ : ದೇಶಾದ್ಯಂತ ಹೃದಯಾಘಾತ ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ (Dr Shashikala) ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.

ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.

ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.

ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

12 minutes ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

31 minutes ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

38 minutes ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

53 minutes ago

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

2 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

2 hours ago