Featured

ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ತೆಕ್ಕೆಗೆ : ಪಕ್ಷದ ನಿರ್ಧಾರ ಬದಲಾಗದಿದ್ದರೆ, ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧ – ಅಮೃತ್ ಶೆಣೈ – Vishwanews24

ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಕ್ಷೇತ್ರದ ಹತ್ತು ಶೇಕಡದಷ್ಟು ಕಾಂಗ್ರೆಸಿಗರು ಕೂಡಾ ಜೆಡಿಎಸ್ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಂಕ್ಷಿಯಾದ ಎಐಸಿಸಿ ಸದಸ್ಯ ಅಮೃತ್ ಶೆಣೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್‌ ಪಾಲಾಗಿದೆ. ಈ ವಿಚಾರ ಅಧಿಕೃತವಾಗಿ ಹೊರಬೀಳುತ್ತಿದ್ದಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಗರು ಹೈಕಮಾಂಡ್ ನಿರ್ಧಾರಕ್ಕೆ ಸಿಡಿಮಿಡಿಗೊಂಡಿದ್ಧಾರೆ.

ಈ ಬಗ್ಗೆ  ಮಾತನಾಡಿದ ಅಮೃತ್ ಶೆಣೈ, ” ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ವಿರುದ್ದ ಪಕ್ಷದ ಒಳಗೆ ತೀವ್ರ ಪ್ರತಿಭಟನೆ ಸಲ್ಲಿಸುತ್ತೇನೆ ಒಂದು ವೇಳೆ ಪಕ್ಷದ ನಿರ್ಧಾರ ಬದಲಾಗದಿದ್ದರೆ ನಾನು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕಾಗಿ ನಾನು ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದು ಪಕ್ಷದ ನಿಲುವು ಬದಲಾಗದೇ ಇದ್ದರೆ, ನಾನು ಪಕ್ಷೇತರನಾಗಿ ನಾಮ ಪತ್ರ ಸಲ್ಲಿಸುವ ಬಗ್ಗೆಯೂ ಚಿಂತಿಸುತ್ತೇನೆ. ನನಗೆ ಗೆಲುವು ಅಥವಾ ಸೋಲುವುದು ಮುಖ್ಯವಲ್ಲ. ಸಿದ್ದಾಂತದ ಜತೆ ರಾಜಿ ಆಗದಂತೆ ಬದುಕುವುದು ಮುಖ್ಯ” ಎಂದು ಹೇಳಿದ್ದಾರೆ

ನನ್ನ ನಿರ್ಧಾರವನ್ನು ಹಲವು ಕಾಂಗ್ರೆಸ್ ಕಾರ್ಯಕರ್ತರು ಒಪ್ಪದಿರಬಹುದು. ನನ್ನ ನಿರ್ಧಾರ ಒಪ್ಪಲೇಬೇಕೆಂದು ಒತ್ತಾಯ ಇಲ್ಲ. ಈ ಹಿಂದೆ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಚಿರಋಣಿ. ಬಿಜೆಪಿಯ ಅನ್ಯಾಯವನ್ನು ಮಾತ್ರ ಪ್ರತಿಭಟಿಸಿ ಕಾಂಗ್ರೆಸ್ ಅನ್ಯಾಯಗಳನ್ನು ನುಂಗಿ ಬದುಕಿದರೆ ನನಗೆ ನಾನು ಆತ್ಮ ದ್ರೋಹ ಮಾಡಿದಂತೆ ಆಗುತ್ತದೆ. ಈ ಸನ್ನಿವೇಶ ಉಸಿರುಗಟ್ಟಿದಂತೆ ಇದೆ. ಕಾಂಗ್ರೆಸ್ ನ ಇಂದಿನ ಹೈಕಮಾಂಡ್ ನಿರ್ಧಾರ ಯಾಕೋ ಗಂಟಲಿನ ಕೆಳಗೆ ಇಳಿಯುತ್ತಿಲ್ಲ ಎಂದರು.

 

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

7 hours ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

11 hours ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

14 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

16 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

16 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

16 hours ago