ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ.ನನ್ನ ಮೇಲೆ ವಿಶ್ವಾಸ ಇಟ್ಟು ಅವಕಾಶ ನೀಡಿರುವ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಕೃತಜ್ಞತೆಗಳು. ನಾವೆಲ್ಲ ಒಗ್ಗಟ್ಟಾಗಿ ಬಿಜೆಪಿಯ ರಥ ಎಳೆಯುತ್ತೇವೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕುರಿತು ಇಂದು ಸಂಜೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯಿಂದ 300 ಸಂಸದರು ಗೆದ್ದು ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುತ್ತೇವೆ. ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಈ ಬಾರಿ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರೇ ನಮ್ಮ ಸೇನಾನಿಗಳು. ಸೈನಿಕರು ಗಡಿಯಲ್ಲಿ ಯುದ್ದ ಮಾಡಿ ದಂತೆ ನಮ್ಮ ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಮೋದಿಯನ್ನು ಗೆಲ್ಲಿಸಲು ಹಗಲಿರುಳು ದುಡಿಯುತ್ತಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಟಿಕೆಟ್ ಆಕಾಂಕ್ಷೆ ಪಡುವುದು ತಪ್ಪಲ್ಲ. ಟಿಕೆಟ್ ಸಿಕ್ಕಿದ ನಂತರ ಎಲ್ಲರು ಅಭ್ಯರ್ಥಿ ಪರ ದುಡಿಯುತ್ತಾರೆ ಎಂದು ಅವರು ತಿಳಿಸಿದರು.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ..
ಈ ಕುರಿತು ಪ್ರತಿಕ್ರಿಯೆ ನೀಡಿರು ಶೋಭಾ ಕರಂದ್ಲಾಜೆ ಅವರು, ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ ನನ್ನ ಧನ್ಯವಾದ. ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ್ದಾರೆ. ನಾವು ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ. ದೇಶಾದ್ಯಂತ ಬಿಜೆಪಿಯಿಂದ 300 ಸಂಸದರು ಆಯ್ಕೆಯಾಗುತ್ತಾರೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಈ ಬಾರಿ ಗೆದ್ದು ಸವಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…