ಉಡುಪಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಮೀನುಗಾರ ಸಮಾಜದ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಬೇಕು ಎಂದು ವಿವಿಧ ಮೀನುಗಾರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ, ರಾಜಕೀಯ ಹಿನ್ನೆಲೆಯಿಂದ ಬಂದಿರುವ ಪ್ರಮೋದ್ ಮಧ್ವರಾಜ್, ಶಾಸಕರಾಗಿ, ಸಚಿವರಾಗಿಯೂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಭ್ರಷ್ಟಾಚಾರ, ಕಳಂಕ ರಹಿತ ಪರಿಶುದ್ಧ ರಾಜಕಾರಣಿಯಾಗಿ 2018ರ ಅವಧಿ ಯಲ್ಲಿ ಇಡೀ ರಾಜ್ಯದಲ್ಲೇ ನಂ.1 ಶಾಸಕರಾಗಿ ಮೂಡಿಬಂದಿದ್ದರು ಎಂದರು.
ಈಗಿನ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯಮಟ್ಟದ ನಾಯಕಿಯಾಗಿರುವು ದರಿಂದ ಅವರಿಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಆದರೆ ಮೀನುಗಾರರಾಗಿ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರವೇ ಹೆಚ್ಚು ಸೂಕ್ತವಾಗಿರುವುದರಿಂದ ಅವರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅವರು ತಿಳಿಸಿದರು.
ಮಲ್ಪೆ ಬಂದರು ಸಂಪರ್ಕಿಸುವ ಆದಿಉಡುಪಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗದೆ ನನೆಗುದಿಗೆ ಬಿದ್ದಿದೆ. ಅನೇಕ ವರ್ಷಗಳ ವಿಮಾನ ನಿಲ್ದಾಣದ ಸ್ಥಾಪನೆ ಕೂಡ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಮೀನು ಗಾರರ ಅನೇಕ ಸಮಸ್ಯೆಗಳು ಇನ್ನೂ ಪರಿಹಾರ ಕಂಡಿಲ್ಲ. ಈ ಎಲ್ಲ ಯೋಜನೆ ಅನುಷ್ಠಾನ ಮಾಡಲು ಸಮರ್ಥ ನಾಯಕತ್ವ ಹೊಂದಿರುವ ಪ್ರಮೋದ್ ಮಧ್ವರಾಜ್ ಅವರಿಂದ ಮಾತ್ರ ಸಾಧ್ಯ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೀನುಗಾರ ಮುಖಂಡರಾದ ಸಾಧು ಸಾಲಿಯನ್, ಜಗನ್ನಾಥ ಕುಂದರ್, ಜಗನ್ನಾಥ ಅಮೀನ್, ಮೋಹನ್ ಕುಂದರ್, ನಾಗರಾಜ್ ಸುವರ್ಣ, ಕೃಷ್ಣ ಸುವರ್ಣ, ಸುಭಾಸ್ ಮೆಂಡನ್, ರವಿರಾಜ್ ಸುವರ್ಣ, ಯೋಗೀಶ್ ಸಾಲ್ಯಾನ್ ಉಪಸ್ಥಿತರಿದ್ದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…