ಉಡುಪಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಮೀನುಗಾರ ಸಮಾಜದ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಬೇಕು ಎಂದು ವಿವಿಧ ಮೀನುಗಾರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ, ರಾಜಕೀಯ ಹಿನ್ನೆಲೆಯಿಂದ ಬಂದಿರುವ ಪ್ರಮೋದ್ ಮಧ್ವರಾಜ್, ಶಾಸಕರಾಗಿ, ಸಚಿವರಾಗಿಯೂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಭ್ರಷ್ಟಾಚಾರ, ಕಳಂಕ ರಹಿತ ಪರಿಶುದ್ಧ ರಾಜಕಾರಣಿಯಾಗಿ 2018ರ ಅವಧಿ ಯಲ್ಲಿ ಇಡೀ ರಾಜ್ಯದಲ್ಲೇ ನಂ.1 ಶಾಸಕರಾಗಿ ಮೂಡಿಬಂದಿದ್ದರು ಎಂದರು.
ಈಗಿನ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯಮಟ್ಟದ ನಾಯಕಿಯಾಗಿರುವು ದರಿಂದ ಅವರಿಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಆದರೆ ಮೀನುಗಾರರಾಗಿ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರವೇ ಹೆಚ್ಚು ಸೂಕ್ತವಾಗಿರುವುದರಿಂದ ಅವರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅವರು ತಿಳಿಸಿದರು.
ಮಲ್ಪೆ ಬಂದರು ಸಂಪರ್ಕಿಸುವ ಆದಿಉಡುಪಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗದೆ ನನೆಗುದಿಗೆ ಬಿದ್ದಿದೆ. ಅನೇಕ ವರ್ಷಗಳ ವಿಮಾನ ನಿಲ್ದಾಣದ ಸ್ಥಾಪನೆ ಕೂಡ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಮೀನು ಗಾರರ ಅನೇಕ ಸಮಸ್ಯೆಗಳು ಇನ್ನೂ ಪರಿಹಾರ ಕಂಡಿಲ್ಲ. ಈ ಎಲ್ಲ ಯೋಜನೆ ಅನುಷ್ಠಾನ ಮಾಡಲು ಸಮರ್ಥ ನಾಯಕತ್ವ ಹೊಂದಿರುವ ಪ್ರಮೋದ್ ಮಧ್ವರಾಜ್ ಅವರಿಂದ ಮಾತ್ರ ಸಾಧ್ಯ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೀನುಗಾರ ಮುಖಂಡರಾದ ಸಾಧು ಸಾಲಿಯನ್, ಜಗನ್ನಾಥ ಕುಂದರ್, ಜಗನ್ನಾಥ ಅಮೀನ್, ಮೋಹನ್ ಕುಂದರ್, ನಾಗರಾಜ್ ಸುವರ್ಣ, ಕೃಷ್ಣ ಸುವರ್ಣ, ಸುಭಾಸ್ ಮೆಂಡನ್, ರವಿರಾಜ್ ಸುವರ್ಣ, ಯೋಗೀಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…