Featured

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಸ್ಪರ್ಧಿಸಲಿದ್ದಾರ ಪ್ರಮೋದ್ ಮಧ್ವರಾಜ್ ?? Vishwanews24

ಉಡುಪಿ,: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕಮಗಳೂರು- ಉಡುಪಿ ಕ್ಷೇತ್ರವನ್ನು ಕಾಂಗ್ರೆಸ್​ ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಕ್ಷೇತ್ರದಲ್ಲಿ ಬಿಜೆಪಿ ನಂತರ ಕಾಂಗ್ರೆಸ್​ ನಾಯಕರು ಒಂದಷ್ಟು ವರ್ಚಸ್ಸು ಹೊಂದಿದ್ದರೆ ಬಿಟ್ಟರೆ, ಜೆಡಿಎಸ್​ನಿಂದ ಹೇಳಿಕೊಳ್ಳುವಂತಹ ಪ್ರಬಲ ನಾಯಕರು ಅಲ್ಲಿ ಇಲ್ಲ. ಎಂಎಲ್​ಸಿ ಭೋಜೆಗೌಡ ಒಂದಿಷ್ಟು ಪ್ರಭಾವ ಹೊಂದಿದ್ದು ಸಿಎಂ ಕುಮಾರಸ್ವಾಮಿ ಆಪ್ತರಾಗಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್​ ಒಂದು ಬಾರಿ ಮಾತ್ರ ಗೆದ್ದಿರುವ ಇತಿಹಾಸವಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರಗಳು ಸೀಟು ಹಂಚಿಕೆಯಲ್ಲಿ ಜೆಡಿಎಸ್‌ಗೆ ಬಿಟ್ಟುಕೊಡಲಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕೀಳಿಸುವ ಬಗ್ಗೆ ಮಾತುಕತೆಗಳು ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಇನ್ನಷ್ಟೆ ಹೊರಬರಬೇಕಾಗಿದೆ.

ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಪ್ರಮೋದ್ ಮಧ್ವರಾಜ್‌ರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಪ್ರಮೋದ್ ಕಾಂಗ್ರೆಸ್ ನಾಯಕರ ಅಭಿಪ್ರಾಯಕ್ಕಾಗಿ ಮುಂದೆ ನೋಡುತ್ತಿದ್ದಾರೆ. ಎರಡು ಪಕ್ಷಗಳು ಒಪ್ಪಿದರೆ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವುದು ಖಚಿತ ಎಂಬುದು ಮೂಲಗಳು ತಿಳಿಸಿವೆ.

ಈ ಕುರಿತು ದೂರವಾಣಿ ಮೂಲಕ ಸಂಪರ್ಕಿಸಿ ಪ್ರತಿಕ್ರಿಯಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಇಲ್ಲಿ ಎರಡೂ ಪಕ್ಷ ಜೊತೆಯಾಗಿ ಚುನಾವಣೆಗೆ ಸ್ಪರ್ಧಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಒಬ್ಬ ಅಭ್ಯರ್ಥಿ ಯನ್ನು ಚುನಾವಣೆಗೆ ನಿಲ್ಲಿಸಲಿದೆ. ಚಿಹ್ನೆ ಮಾತ್ರ ಜೆಡಿಎಸ್ ಆಗಿರುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಆಗಬೇಕೆಂಬುದು ಚರ್ಚೆ ನಡೆಯುತ್ತಿದೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಸ್ಪರ್ಧಿಸುವ ಕುರಿತು ನನ್ನ ಅಭಿಪ್ರಾಯ ಕೇಳಿದ್ದಾರೆ. ನಾನು ಕಾಂಗ್ರೆಸ್ ವರಿಷ್ಠರು, ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದೇನೆ. ಆ ತೀರ್ಮಾನ ಈವರೆಗೆ ಅಂತಿಮ ಆಗಿಲ್ಲ ಎಂದು ಅವರು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷ ಗಟ್ಟಿಯಾಗಿದೆ. ಆದುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಯಾಗಿ ಇಲ್ಲಿ ಸ್ಪರ್ಧಿಸಿದರೆ ನಾವು ಪ್ರಬಲರಾಗುತ್ತೇವೆ. ಫಲಿತಾಂಶ ಕೊಡುವುದು ಜನರ ಕೈಯಲ್ಲಿದೆ. ಈ ಹಿಂದೆ ಚುನಾವಣೆಗಳು ಕೂಡ ಅದಕ್ಕೆ ಸಾಕ್ಷಿಯಾಗಿವೆ. ಅನಿರೀಕ್ಷಿತ ಫಲಿತಾಂಶ ಕೊಡುವುದೇ ಪ್ರಜಾ ಪ್ರಭುತ್ವದ ವ್ಯವಸ್ಥೆಯ ಪ್ರಮುಖ ಅಂಶ ಆಗಿದೆ ಎಂದು ಅವರು ಹೇಳಿದರು.

 

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago