ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಅಂತಿಮವಾಗಿ 12 ಅಭ್ಯರ್ಥಿಗಳು ಸ್ಪರ್ಧೆ – Vishwanews24

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮವಾಗಿ 12 ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ತಿಳಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 14,98,016 ಮತದಾರರಿದ್ದು ಅದರಲ್ಲಿ ಮಹಿಳೆಯರು 7,65,823 ಮತ್ತು ಪುರುಷರು 7,32,193. ಯುವ ಮತದಾರರ ಸಂಖ್ಯೆ 30,826 ಇದೆ. 11,861 ಮತದಾರ ವಿಕಲಚೇತನರಾಗಿದ್ದಾರೆಂದು ಹೆಫ್ಸಿಬಾ ಮಾಹಿತಿ ನೀಡಿದ್ದಾರೆ.

ಮಹಿಳೆಯರ ವಿಶೇಷ ಮತದಾನ ಕೇಂದ್ರವಾಗಿ 26 ಸಖಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ಎರಡು ಕ್ಷೇತ್ರದಲ್ಲಿ 1837 ಮತದಾನ ಕೇಂದ್ರ ಸ್ಥಾಪಿಸಲಿದ್ದು, ಉಡುಪಿಯಲ್ಲಿ 1,111 ಮತದಾನ ಕೇಂದ್ರವಿರಲಿದೆ. ಸುಮಾರು 5616 ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ಆಯೋಗದಿಂದ ಅನುಮೋದನೆಗೊಂಡ ಬಳಿಕ ಬ್ಯಾಲೆಟ್‌ ಯುನಿಟ್‌ಗೆ ಅಳವಡಿಸುವ ಹಾಗೂ ಟೆಂಡರ್ ಮತಕ್ಕೆ ಅಗತ್ಯವಿರುವ ಮತಪತ್ರಗಳನ್ನು ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಿಸಲಾಗುತ್ತದೆ. ಸೇವಾ ಮತದಾರರಿಗೆ ಅಂಚೆ ಮತಪತ್ರವನ್ನು ಇಟಿಬಿಪಿಎಸ್ ತಂತ್ರಾಂಶದ ಮೂಲಕ ಕಳುಹಿಸಲಾಗುವುದು ಎಂದರು.

ಲೋಕಸಭಾ ಕ್ಷೇತ್ರದಲ್ಲಿ 548 ಪುರುಷ ಹಾಗೂ 7 ಮಹಿಳಾ ಸೇವಾ ಮತದಾರರಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆಮತಪತ್ರವನ್ನು ಮುದ್ರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶೇ 99.9ರಷ್ಟು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿದೆ.

ಪಿ.ಪರಮೇಶ್ವರ್ (ಬಿಎಸ್ಪಿ),

ಪ್ರಮೋದ್ ಮಧ್ವರಾಜ್ (ಜೆಡಿ (ಎಸ್),

ಶೋಭಾ ಕರಂದ್ಲಾಜೆ (ಬಿಜೆಪಿ),

ಪಿ ಗೌತಮ್ ಪ್ರಭು (ಶಿವ ಸೇನೆ),

ಎಂ.ಕೆ ದಯಾನಂದ (ಪ್ರೌಟಿಸ್ಟ್ ಸರ್ವಾ ಸಮಾಜ),

ವಿಜಯಕುಮಾರ್ (ಸಿಪಿಐ- ಎಂಎಲ್ ರೆಡ್ಸ್ಟಾರ್),

ಸುರೇಶ್ ಕುಂದರ್ (ಉತ್ತರ ಪ್ರಜಾಕೀಯ ಪಕ್ಷದ ),

ಶೇಖರ್ ಹವಾನ್ಜೆ (ಆರ್ಪಿಐ)

ಮತ್ತು ಸ್ವತಂತ್ರ ಅಭ್ಯರ್ಥಿಗಳಾದ

ಅಬ್ದುಲ್ ರಹಮಾನ್,

ಅಮೃತ್ ಶೆಣೈ,

ಎಂ.ಕೆ. ಗಣೇಶ್

ಕೆ.ಸಿ. ಪ್ರಕಾಶ್

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago